ದೇಶದೊಳಗೆ ನುಗ್ಗಿ ಹೊಡಿತೀವಿ: ಸಚಿವ ರಾಜ್‌ನಾಥ್‌

KannadaprabhaNewsNetwork |  
Published : Apr 06, 2024, 12:54 AM ISTUpdated : Apr 06, 2024, 05:17 AM IST
ರಾಜನಾಥ್‌ ಸಿಂಗ್‌ | Kannada Prabha

ಸಾರಾಂಶ

ದೇಶದ ಶಾಂತಿಯನ್ನು ಹಾಳುಗೆಡವಲು ಯತ್ನಿಸುವ ಉಗ್ರರಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿರುವ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌, ಒಂದು ವೇಳೆ ಉಗ್ರರು ಅವರು ಪಾಕಿಸ್ತಾನದೊಳಗೆ ನುಗ್ಗಿದರೆ, ಅವರನ್ನು ಆ ದೇಶದೊಳಗೆ ನುಗ್ಗಿ ಅಲ್ಲಿಯೇ ಮುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ: ದೇಶದ ಶಾಂತಿಯನ್ನು ಹಾಳುಗೆಡವಲು ಯತ್ನಿಸುವ ಉಗ್ರರಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿರುವ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌, ಒಂದು ವೇಳೆ ಉಗ್ರರು ಅವರು ಪಾಕಿಸ್ತಾನದೊಳಗೆ ನುಗ್ಗಿದರೆ, ಅವರನ್ನು ಆ ದೇಶದೊಳಗೆ ನುಗ್ಗಿ ಅಲ್ಲಿಯೇ ಮುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪಾಕ್‌ನಲ್ಲಿ ಕಳೆದ 2 ವರ್ಷದಲ್ಲಿ ನಡೆದ 20 ಉಗ್ರರ ನಿಗೂಢ ಹತ್ಯೆಯಲ್ಲಿ ಭಾರತದ ಕೈವಾಡದ ಕುರಿತು ಬ್ರಿಟನ್‌ ಪತ್ರಿಕೆ ವರದಿ ಬೆನ್ನಲ್ಲೇ, ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಸಚಿವ ಸಿಂಗ್‌ ಈ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ಮೋದಿ ಈಗಾಗಲೇ ಸತ್ಯವನ್ನು ಸ್ಪಷ್ಟಪಡಿಸಿದ್ದಾರೆ. ಭಾರತಕ್ಕೆ ಈ ಸಾಮರ್ಥ್ಯ ಇದೆ ಮತ್ತು ಇದೀಗ ಪಾಕಿಸ್ತಾನ ಕೂಡಾ ಅದನ್ನು ಅರ್ಥಮಾಡಿಕೊಳ್ಳುತ್ತಿದೆ ಎಂದು ಸಿಂಗ್‌ ಹೇಳಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ- ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ದಿಲ್ಲಿಯಲ್ಲಿ ಜ.1ರಿಂದ ಕೇಂದ್ರದ ಭಾರತ್‌ ಟ್ಯಾಕ್ಸಿ ಸಂಚಾರ