‘ಮತಗಳ್ಳತನ’ ಕೊಳಕು ನುಡಿ : ಚುನಾವಣಾ ಆಯೋಗ ಗರಂ

KannadaprabhaNewsNetwork |  
Published : Aug 15, 2025, 01:00 AM IST
ಚುನಾವಣಾ ಆಯೋಗ | Kannada Prabha

ಸಾರಾಂಶ

ಚುನಾವಣಾ ಆಯೋಗ ಮತಗಳವು ಮಾಡುತ್ತಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರಿಗೆ ಆಯೋಗ ಮತ್ತೆ ತೀಕ್ಷ್ಣ ಮಾತುಗಳಲ್ಲಿ ಪ್ರತಿಕ್ರಿಯೆ ನೀಡಿದೆ.

 ನವದೆಹಲಿ :  ಚುನಾವಣಾ ಆಯೋಗ ಮತಗಳವು ಮಾಡುತ್ತಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರಿಗೆ ಆಯೋಗ ಮತ್ತೆ ತೀಕ್ಷ್ಣ ಮಾತುಗಳಲ್ಲಿ ಪ್ರತಿಕ್ರಿಯೆ ನೀಡಿದೆ. ‘ಮತಗಳ್ಳತನ’ದಂತಹ ಕೊಳಕು ನುಡಿಗಟ್ಟು ಉಲ್ಲೇಖಿಸುವ ಮೂಲಕ ಸುಳ್ಳು ಕಥನವನ್ನು ಸೃಷ್ಟಿಸಬೇಡಿ. ಅದರ ಬದಲು ಅದಕ್ಕೆ ಸೂಕ್ತ ಸಾಕ್ಷ್ಯಾಧಾರಗಳನ್ನು ನೀಡಿ ಎಂದು ತಾಕೀತು ಮಾಡಿದೆ. 

ಈ ಬಗ್ಗೆ ಚುನಾವಣಾ ಆಯೋಗ ಹೇಳಿಕೆ ಬಿಡುಗಡೆ ಮಾಡಿದ್ದು, ‘1951-52ರಲ್ಲಿ ನಡೆದ ಮೊದಲ ಚುನಾವಣೆಯಿಂದಲೇ ಒಬ್ಬ ವ್ಯಕ್ತಿ-ಒಂದು ಮತ ನೀತಿ ಜಾರಿಯಲ್ಲಿದೆ. ಯಾವುದೇ ವ್ಯಕ್ತಿ ಚುನಾವಣೆಯೊಂದರಲ್ಲಿ 2 ಬಾರಿ ಮತ ಚಲಾಯಿಸಿದ ದಾಖಲೆಯಿದ್ದರೆ, ಅದನ್ನು ಲಿಖಿತ ಅಫಿಡವಿಟ್ ಮೂಲಕ ಚುನಾವಣಾ ಆಯೋಗಕ್ಕೆ ನೀಡಬೇಕು. ಅದರ ಹೊರತಾಗಿ ಆಧಾರರಹಿತವಾಗಿ ಮತಗಳ್ಳತನದಂತಹ ಕೊಳಕು ಪದಪ್ರಯೋಗ ಮಾಡಬಾರದು’ ಎಂದು ಆಗ್ರಹಿಸಿದೆ.

ಕರ್ನಾಟಕ, ಮಹಾರಾಷ್ಟ್ರ, ಬಿಹಾರ ಸೇರಿ ದೇಶದ ಅನೇಕ ರಾಜ್ಯಗಳಲ್ಲಿ ಮತಗಳ್ಳತನ ನಡೆದಿದೆ. ಇದರಿಂದ ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 48 ಕ್ಷೇತ್ರಗಳಲ್ಲಿ ಸೋತಿದೆ ಎಂಬದು ರಾಹುಲ್‌ ಆರೋಪ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ದಿಲ್ಲಿಯಲ್ಲಿ ಜ.1ರಿಂದ ಕೇಂದ್ರದ ಭಾರತ್‌ ಟ್ಯಾಕ್ಸಿ ಸಂಚಾರ