ಕನ್ನಡಪ್ರಭ ವಾರ್ತೆ ಬೆಳಗಾವಿ
ಇದಕ್ಕೂ ಮೊದಲು ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದ ಕರ್ನಾಟಕ ನೀರಾವರಿ ನಿಗಮದ ಕಚೇರಿವರೆಗೂ ಪ್ರತಿಭಟನೆ ನಡೆಸಿದರು. ಬಡವರ ನೆರವಿಗೆ ಬಾರದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ, ನೀರಾವರಿ ನಿಗಮದ ಮುಖ್ಯ ಅಭಿಯಂತರ ಅಧಿಕಾರಿಗೆ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪರಿಹಾರ ಕೊಡಿ ಇಲ್ಲವಾದರೇ ಒಂದು ತೊಟ್ಟು ವಿಷ ಕೊಡಿ ಎಂದು ರೈತರು ಆಕ್ರೋಶ ಹೊರಹಾಕಿದರು. ನೀರಾವರಿ ಕಚೇರಿ ಮುತ್ತಿಗೆ ಹಾಕಿ, ಪರಿಹಾರ ವಿಳಂಬ ಮಾಡುತ್ತಿರುವ ನೀರಾವರಿ ಅಧಿಕಾರಿಗಳ ವಿರುದ್ಧ ಧರಣಿ ಸತ್ಯಾಗ್ರಹ ನಡೆಸಿದರು.ರೈತರ ಫಲವತ್ತಾದ 394 ಎಕರೆ ಜಮೀನುಗಳು ಹಿಡಕಲ್ ಡ್ಯಾಂ ಹಿನ್ನೀರಿನಿಂದ ಮುಳುಗಡೆಯಾಗಿದೆ. ಸರ್ಕಾರ ಪರಿಹಾರ ನೀಡಬೇಕು ಎಂದು ಈ ಭಾಗದ ರೈತರು ಕಳೆದ 40 ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದ್ದಾರೆ. ಅನ್ನದಾತರಿಗೆ ಮೋಸ ಮಾಡುತ್ತಿರುವ 3 ಅಧಿಕಾರಿಗಳನ್ನು ಶೀಘ್ರವೇ ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿದರು.
ಜೀವನ ಉಪಯೋಗಕ್ಕೆ ಮೂಲಾಧಾರ ಜಮೀನು ಮುಳುಗಡೆಯಾಗಿದೆ. ಡ್ಯಾಂ ಹಿನ್ನೀರಿನಲ್ಲಿ ಸಣ್ಣ ಭೂ ಮಾಲಿಕರು ಇದ್ದೇವೆ. ಸರ್ಕಾರ ರೈತರ ಕಷ್ಟಗಳನ್ನು ಅರಿತು ತ್ವರೀತವಾಗಿ ಭೂ ಪರಿಹಾರ ನೀಡಬೇಕು, ಇಲ್ಲವಾದರೇ ಜಿಲ್ಲಾಧಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ರೈತರಿಗೆ ಕಿರುಕುಳ ನೀಡಿದ ಮೂವರು ಅಧಿಕಾರಿಗಳನ್ನು ಪ್ರತಿಭಟನಾ ಸ್ಥಳಕ್ಕೆ ಕರೆತರುವಂತೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ನಿಂಗಪ್ಪ ಗೋಣಿ, ದುಂಡಪ್ಪ ಬಡಿಗೇರ, ಬಸಪ್ಪ ಬಸಾಪೂರಿ, ನಿಂಗಪ್ಪ ಮಾವನೂರಿ, ರಾಯಗೌಡ ಪಾಟೀಲ್, ಬಸವರಾಜ ಮೋಕಾಶಿ, ಪರಸಪ್ಪಾ ಪಾಟೀಲ್, ಕಮಲವ್ವ ಇರಗಾರ, ಶೋಬಾ ಮೇಕಲಿ, ಸಂತೋಷ ಪಾಟೀಲ, ಸವಿತಾ ಕುಂಬಾರ, ಗೌರವಾ ಮೂಕಾಶಿ, ಶಾಂತವ್ವ ಗಸ್ತಿ, ಸುಶೀಲಾ ಮಾವನೂರಿ, ಭರಮಾ ಕಮತೆ, ಉದಯ ಹೀರೆಮಠ ಹಾಗೂ ಇತರರು ಇದ್ದರು.