ಚಿಪ್ಗೆ ಎಐ ಕಂಪನಿಯಿಂದ ಭಾರೀ ಬೇಡಿಕೆಮಾರುಕಟ್ಟೆಯಲ್ಲಿ ಕೊರತೆ ಕಾರಣ ಬೆಲೆ ಏರಿಕೆ2028ರ ತನಕ ಮುಂದುವರೆಯಲಿದೆ ಸಮಸ್ಯೆ
ಈ ಪರಿಸ್ಥಿತಿ ಸದ್ಯದಲ್ಲಿ ಸುಧಾರಿಸುವುದು ಕಷ್ಟಸಾಧ್ಯ. ಕಾರಣ, ಚಿಪ್ ಉತ್ಪಾದನಾ ಕಂಪನಿಗಳ ಸ್ಥಾಪನೆಗೆ 3-5 ವರ್ಷಗಳಾದರೂ ಬೇಕು. ಆದಕಾರಣ, 2028ರ ವರೆಗೆ ಹೊಸ ಉತ್ಪಾದಕರು ತಲೆಯೆತ್ತದೆ, ಮಾರುಕಟ್ಟೆಯಲ್ಲಿ ಚಿಪ್ಗಳ ಕೊರತೆ ಮುಂದುವರೆಯಲಿದೆ.
==ಜಲ್ಲಿಕಟ್ಟು ಸ್ಪರ್ಧೆ ಸಾಧಕರಿಗೆ ಸರ್ಕಾರಿ ಉದ್ಯೋಗ: ಸ್ಟಾಲಿನ್
- ಪಶುಸಂಗೋಪನಾ ಇಲಾಖೆಯಲ್ಲಿ ಈ ನೌಕರಿ
ಮದುರೈ: ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಅತಿ ಹೆಚ್ಚು ಗೂಳಿ ಪಳಗಿಸುವ ಅಪರೂಪದ ಸಾಧಕರಿಗೆ ಆದ್ಯತೆ ಮೇರೆಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಘೋಷಿಸಿದ್ದಾರೆ. ಜತೆಗೆ, ಜಲ್ಲಿಕಟ್ಟು ಸ್ಪರ್ಧೆಗೆ ಹೆಸರುವಾಸಿಯಾದ ಅಲಂಗನಲ್ಲೂರ್ನಲ್ಲಿ ಸ್ಥಳೀಯ ಗೂಳಿಗಳಿಗಾಗಿ ಅತ್ಯಾಧುನಿಕ ಪಶುಸಂಗೋಪನಾ ಆಸ್ಪತ್ರೆ ಸ್ಥಾಪಿಸುವುದಾಗಿ ತಿಳಿಸಿದ್ದಾರೆ.
ಆಲಂಗನಲ್ಲೂರಿನಲ್ಲಿ ಆಯೋಜಿಸಿದ್ದ ಪ್ರತಿಷ್ಠಿತ ಜಲ್ಲಿಕಟ್ಟು ಸ್ಪರ್ಧೆ ಕಾರ್ಯಕ್ರಮದಲ್ಲಿ ಶನಿವಾರ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ಜಲ್ಲಿಕಟ್ಟು ಸ್ಪರ್ಧೆಗಳಲ್ಲಿ ಅತಿ ಹೆಚ್ಚುಗೂಳಿಗಳನ್ನು ಪಳಗಿಸಿ ಸಾಧನೆ ಮೆರೆಯುವ ವ್ಯಕ್ತಿಗಳಿಗೆ ಪಶು ಮತ್ತು ಸಂಗೋಪನಾ ಇಲಾಖೆಯಲ್ಲಿ ಆದ್ಯತೆ ಮೇರೆಗೆ ಸೂಕ್ತ ಉದ್ಯೋಗ ನೀಡಲಾಗುವುದು. ತಮಿಳು ಸಾಂಸ್ಕೃತಿಕ ಪರಂಪರೆ ಕಾಪಾಡಿಕೊಂಡು ಬರುತ್ತಿರುವ ಯುವಕರ ಸಾಹಸ ಗೌರವಿಸುವ ಸಲುವಾಗಿ ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಅವರು ಹೇಳಿದ್ದಾರೆ.ಇದೇ ವೇಳೆ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಹೆಸರುವಾಸಿಯಾದ ಅಲಂಗನಲ್ಲೂರಿನಲ್ಲಿ 2 ಕೋಟಿ ರು. ವೆಚ್ಚದಲ್ಲಿ ಅತ್ಯಾಧುನಿಕ ಪಶು ಆಸ್ಪತ್ರೆ ನಿರ್ಮಿಸಲುದ್ದೇಶಿಸಿದ್ದು, ಅಲ್ಲಿ ಸ್ಥಳೀಯ ಗೂಳಿಗಳನ್ನು ವೈಜ್ಞಾನಿಕವಾಗಿ ಸಂರಕ್ಷಿಸುವ ಮತ್ತು ಚಿಕಿತ್ಸೆ ನೀಡುವ ಕಾರ್ಯ ಮಾಡಲಾಗುವುದು ಎಂದಿದ್ದಾರೆ.==
ಶಬರಿಮಲೆ: ಚಿನ್ನದ ಬಳಿಕ ಪಡಿ ಪೂಜೆಯಲ್ಲೂ ಅಕ್ರಮ ?ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಚಿನ್ನ ನಾಪತ್ತೆ ಪ್ರಕರಣ ದೊಡ್ಡ ಸಂಚಲನ ಸೃಷ್ಟಿಸಿರುವ ನಡುವೆಯೇ ಮತ್ತೊಂದು ಅಕ್ರಮದ ಶಂಕೆ ವ್ಯಕ್ತವಾಗಿದ್ದು, ಪಡೆ ಪೂಜೆ ಕಾಣಿಕೆ ಹಂಚಿಕೆಯಲ್ಲಿಯೂ ಭ್ರಷ್ಟಾಚಾರ, ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ.ಈ ಬಗ್ಗೆ ಜಾಗೃತ ಮತ್ತು ಭ್ರಷ್ಟಾಚಾರ ನಿಗ್ರಹ ದಳ( ವಿಎಸಿಬಿ)ಯ ಗುಪ್ತಚರ ವಿಭಾಗ ಬಹಿರಂಗ ಪಡಿಸಿದೆ. ಪವಿತ್ರ ಪಡಿಪೂಜೆಯ ಬುಕ್ಕಿಂಗ್, ಭಕ್ತರಿಗೆ ಟಿಕೆಟ್ ವಿತರಣೆಯಲ್ಲಿ ನಿಗದಿಗಿಂತ ಹಲವು ಪಟ್ಟು ಹೆಚ್ಚು ದರಕ್ಕೆ ಮಾರಾಟ, ಹಣ ನೀಡಿದವರಿಗೆ ಪೂಜೆಯಲ್ಲಿ ಆದ್ಯತೆ ಸೇರಿದಂತೆ ಅನೇಕ ಅಕ್ರಮ ನಡೆದಿರುವ ಸಾಧ್ಯತೆ ಬಗ್ಗೆ ವರದಿ ಮಾಡಿದೆ. ಮಾತ್ರವಲ್ಲದೇ ತಿರುವಾಂಕೂರು ದೇವಸ್ವಂ ಮಂಡಳಿ( ಟಿಡಿಬಿ) ಸಿಬ್ಬಂದಿ ಮತ್ತು ಇತರ ಏಜೆಂಟ್ಗಳು ಇದರಲ್ಲಿ ಭಾಗಿದಾರರು ಎಂದು ಉಲ್ಲೇಖಿಸಿದೆ.