ಹಿಂಸಾಪೀಡಿತ ಮಣಿಪುರಕ್ಕೆ 1 ವರ್ಷದ ಬಳಿಕ ಸರ್ಕಾರ

Published : Feb 04, 2026, 08:51 AM IST
Yumnam Khemchand Singh

ಸಾರಾಂಶ

ಜನಾಂಗೀಯ ಸಂಘರ್ಷದ ಕಾರಣ ಕಳೆದ ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಬಿಜೆಪಿ ನಾಯಕ ಖೇಮಚಂದ್‌ ಸಿಂಗ್‌ ಶಾಸಕಾಂಗ ಪಕ್ಷದ ನಾಯಕರಾಗಿ ಮಂಗಳವಾರ ಆಯ್ಕೆ

 ನವದೆಹಲಿ: ಜನಾಂಗೀಯ ಸಂಘರ್ಷದ ಕಾರಣ ಕಳೆದ ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಬಿಜೆಪಿ ನಾಯಕ ಖೇಮಚಂದ್‌ ಸಿಂಗ್‌ ಶಾಸಕಾಂಗ ಪಕ್ಷದ ನಾಯಕರಾಗಿ ಮಂಗಳವಾರ ಆಯ್ಕೆಯಾಗಿದ್ದು, ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ನೇಮ್ಚಾ ಕಿಪ್‌ಗೆನ್‌ ಉಪಮುಖ್ಯಮಂತ್ರಿ

ಕುಕಿ ಮುಖಂಡೆ ಹಾಗೂ ಮಾಜಿ ಸಚಿವೆ ನೇಮ್ಚಾ ಕಿಪ್‌ಗೆನ್‌ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

2023ರಲ್ಲಿ ಕುಕಿ ಮತ್ತು ಮೈತೇಯಿ ಗುಂಪುಗಳ ನಡುವೆ ಹಿಂಸಾಚಾರ ಭುಗಿಲೆದ್ದು ಕನಿಷ್ಠ 260 ಜನ ಮೃತಪಟ್ಟಿದ್ದರು. ಪರಿಸ್ಥಿತಿ ನಿಯಂತ್ರಣ ತಪ್ಪಿ, ಕಳೆದ ವರ್ಷ ಫೆ.9ರಂದು ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ರಾಜೀನಾಮೆ ನೀಡಿದ್ದರು. ಆ ಬಳಿಕ ಸರ್ಕಾರವನ್ನು ವಿಸರ್ಜಿಸಿ, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೆ ತರಲಾಗಿತ್ತು.

ಇದೇ ಫೆ.12ಕ್ಕೆ ರಾಷ್ಟ್ರಪತಿ ಆಳ್ವಿಕೆಯ ಅವಧಿ ಮುಕ್ತಾಯ

ಇದೇ ಫೆ.12ಕ್ಕೆ ರಾಷ್ಟ್ರಪತಿ ಆಳ್ವಿಕೆಯ ಅವಧಿ ಮುಕ್ತಾಯವಾಗಲಿದೆ. ಈ ಬೆನ್ನಲ್ಲೇ ಬಿಜೆಪಿ ನೇತೃತ್ವದ ನೂತನ ಸರ್ಕಾರ ರಚನೆಯಾಗಿದೆ. 60 ಸದಸ್ಯಬಲದ ವಿಧಾನಸಭೆಯಲ್ಲಿ ಬಿಜೆಪಿ 37 ಸದಸ್ಯರನ್ನು ಹೊಂದಿದೆ. ಈ ಸರ್ಕಾರದ ಅವಧಿ 2027ರವರೆಗೆ ಇರಲಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಆಸ್ಟ್ರೇಲಿಯಾದಲ್ಲಿ 426 ಕೆಜಿಯ ಗಾಂಧಿ ಕಂಚಿನ ಪ್ರತಿಮೆ ಧ್ವಂಸ, ಕಳವು
6 ಕ್ಷೇತ್ರದ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ