ಫಲಿತಾಂಶ ಬಿಜೆಪಿಗೆ ಸ್ಫೂರ್ತಿ, ಕಾಂಗ್ರೆಸ್‌ಗೆ ಆತಂಕ

KannadaprabhaNewsNetwork |  
Published : Oct 09, 2024, 01:42 AM IST
ನಯಾಬ್‌ | Kannada Prabha

ಸಾರಾಂಶ

ಹರ್ಯಾಣ ವಿಧಾನಸಭೆ ಚುನಾವಣೆ ಫಲಿತಾಂಶವು ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ.

ನವದೆಹಲಿ: ಹರ್ಯಾಣ ವಿಧಾನಸಭೆ ಚುನಾವಣೆ ಫಲಿತಾಂಶವು ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಮುಂಬರುವ ಮಹಾರಾಷ್ಟ್ರ, ಜಾರ್ಖಂಡ್‌ ಹಾಗೂ ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಈ ಗೆಲುವು ಅಲ್ಲಿನ ಬಿಜೆಪಿ ಘಟಕಗಳು ಹಾಗೂ ಮಿತ್ರಪಕ್ಷಗಳಲ್ಲಿ ಸ್ಫೂರ್ತಿ ನೀಡಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಎನ್‌ಸಿಪಿ (ಅಜಿತ್‌ ಪವಾರ್ ಬಣ) ನಾಯಕ ಪ್ರಫುಲ್‌ ಪಟೇಲ್‌ ಖುದ್ದು ಈ ಹೇಳಿಕೆ ನೀಡಿದ್ದಾರೆ.

ಆದರೆ ಕಾಂಗ್ರೆಸ್‌ನಲ್ಲಿ ಫಲಿತಾಂಶದಿಂದ ಆತಂಕ ಮನೆ ಮಾಡಿದೆ. ‘ಇಂಡಿಯಾ ಕೂಟದ ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಾಂಗಿಯಾಗಿ ಮುನ್ನುಗ್ಗುವ ದುಸ್ಸಾಹಸವನ್ನು ಮುಂದಿನ ಚುನಾವಣೆಗಳಲ್ಲೂ ಮಾಡಿದರೆ ಅಪಾಯ ಗ್ಯಾರಂಟಿ’ ಎಂದು ಪಕ್ಷದ ಕೆಲವು ನಾಯಕರು ಮಾತಾಡಿಕೊಳ್ಳತೊಡಗಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಾಜಕೀಯ ಪಕ್ಷಗಳಿಗೆ ₹3811 ಕೋಟಿ ಫಂಡ್‌ : ಬಿಜೆಪಿಗೇ 82%!
ಕಾಂಗ್ರೆಸ್‌ನಿಂದ ದೇಶ ವಿರೋಧಿ ಚಟುವಟಿಕೆ : ಮೋದಿ ಮತ್ತೆ ತರಾಟೆ