- ಒಟ್ಟು 13 ಮಂದಿ ಬಲಿ, ಹಲವರು ನಾಪತ್ತೆ
ಡೆಹ್ರಾಡೂನ್/ಶಿಮ್ಲಾ: ಇತ್ತೀಚೆಗಷ್ಟೇ ಸಂಭವಿಸಿದ ಮೇಘಸ್ಫೋಟ, ಭಾರೀ ಮಳೆ, ಭೂಕುಸಿತದಿಂದ ಚೇತರಿಸಿಕೊಳ್ಳುವ ಮೊದಲೇ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದೆ.
ಪರಿಣಾಮ ಉಭಯ ರಾಜ್ಯಗಳಲ್ಲಿ ಹಲವು ನದಿಗಳು ಉಕ್ಕೇರಿ ಹರಿಯುತ್ತಿದ್ದು ಹಲವು ಕಡೆ ಸಾಮಾನ್ಯ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆ ಸಂಬಂಧಿ ಘಟನೆಗಳಿಗೆ 13 ಜನ ಬಲಿಯಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ.ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ಸೋಮವಾರ ರಾತ್ರಿ ಭಾರೀ ಮೇಘಸ್ಫೋಟ ಸಂಭವಿಸಿದ್ದು, ಅದರ ಬೆನ್ನಲ್ಲೇ ಬಿರುಸಿನ ಮಳೆ ಸುರಿದಿದೆ. ಇದರ ಬೆನ್ನಲ್ಲೇ ಸಹಸ್ರಧಾರಾ, ಮಲ್ದೇವ್ತಾ, ಸಂತ್ಲಾ ದೇವಿ, ದಲನ್ವಾಲಾ ಮತ್ತಿತರ ಕಡೆ ಪ್ರವಾಹದ ಸ್ಥಿತಿ ನಿರ್ಮಾಣವಾಗಿದ್ದು, ಹಲವು ರಸ್ತೆಗಳು, ಮನೆಗಳು ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿವೆ. ಹಲವೆಡೆ ಸಂಭವಿಸಿದ ಭೂಕುಸಿತದಿಂದಾಗಿ ಸಾರಿಗೆ ಸಂಪರ್ಕ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರವಾಹದಿಂದಾಗಿ 600ಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದಾರೆ. ಮಳೆ ಸಂಬಂಧಿ ಅನಾಹುತಕ್ಕೆ 10 ಜನರು ಸಾವನ್ನಪ್ಪಿದ್ದಾರೆ.
ಹಿಮಾಚಲವೂ ತತ್ತರ:
ಮಾಹಿತಿ ಪಡೆದ ಮೋದಿ, ಶಾ:
==
ಡೆಹ್ರಾಡೂನ್ನ ವಿಕಾಸಸಾಗರ ಪ್ರದೇಶದಲ್ಲಿ ಟ್ರ್ಯಾಕ್ಟರ್ ಟ್ರ್ಯಾಲಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಕಾರ್ಮಿಕರು ನೋಡ ನೋಡುತ್ತಿದ್ದಂತೆ ಕೊಚ್ಚಿಹೋಗಿದ್ದಾರೆ. ಗಣಿಕೆಲಸಕ್ಕೆಂದು ಕಾರ್ಮಿಕರು ಟ್ರ್ಯಾಕ್ಟರ್ನಲ್ಲಿ ಸಾಗುತ್ತಿದ್ದರು. ಈ ವೇಳೆ ಪ್ರವಾಹದಲ್ಲಿ ಸಿಕ್ಕಿಹಾಕಿಕೊಂಡ ಟ್ರ್ಯಾಕ್ಟರ್ ಮುಂದೆ ಚಲಿಸಲಾಗದೆ ನಿಂತಿದೆ. ಆಗ ಕಾರ್ಮಿಕರು ನೆರವಿಗಾಗಿ ಕೂಗು ಹಾಕಿದ್ದು, ರಕ್ಷಣೆಗೆ ಸಾರ್ವಜನಿಕರು ಧಾವಿಸಬೇಕೆನ್ನುವ ಹೊತ್ತಿಗೆ ಎಲ್ಲರೂ ಟ್ರ್ಯಾಕ್ಟರ್ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆ. ಹೀಗೆ ಕೊಚ್ಚಿ ಹೋಗುತ್ತಿದ್ದವರಲ್ಲಿ ನಾಲ್ಕು ಮಂದಿ ಹೇಗೋ ಅಪಾಯದಿಂದ ಪಾರಾದರೆ, ಉಳಿದ ಆರು ಮಂದಿ ಕೊಚ್ಚಿಕೊಂಡು ಹೋಗಿದ್ದಾರೆ.
ರಭಸದಿಂದ ಹರಿಯುತ್ತಿರುವ ಪ್ರವಾಹದ ಎಲ್ಲವನ್ನೂ ಕೊಚ್ಚಿಕೊಂಡು ಹೋಗುತ್ತಿರುವಾಗ ವ್ಯಕ್ತಿಯೊಬ್ಬ ಕರೆಂಟ್ ಕಂಬವನ್ನೇರಿ ಕುಳಿತಿರುವುದು.