ನವದೆಹಲಿ: ಪಕ್ಷದ ವಿಪ್ ಉಲ್ಲಂಘಿಸಿದ ಕಾರಣಕ್ಕಾಗಿ ಕಾಂಗ್ರೆಸ್ನಿಂದ ವಜಾಗೊಂಡಿರುವ ಹಿಮಾಚಲಪ್ರದೇಶದ 6 ಕಾಂಗ್ರೆಸ್ ಶಾಸಕರು ಹೈಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.
ಸೂಕ್ತ ದಾಖಲೆಗಳನ್ನು ಒದಗಿಸದೇ ನಿಯಮಬಾಹಿರವಾಗಿ ತಮ್ಮನ್ನು ಅನರ್ಹ ಮಾಡಲಾಗಿದೆ ಎಂಬ ಕಾರಣವಿಟ್ಟುಕೊಂಡು ನ್ಯಾಯಾಲಯದಲ್ಲಿ ದಾವೆ ಹೂಡಲು ಕಾಂಗ್ರೆಸ್ ಶಾಸಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇತ್ತೀಚಿನ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಮತಹಾಕಿದ್ದಕ್ಕೆ ಮತ್ತು ಬಜೆಟ್ ಮೇಲಿನ ಮತದಾನಕ್ಕೆ ಗೈರಾದ ಕಾರಣ ನೀಡಿ 6 ಶಾಸಕರನ್ನು ವಿಧಾನಸಭೆ ಸ್ಪೀಕರ್ ವಜಾ ಮಾಡಿದ್ದರು.