ಬಿಹಾರದ ನವಾಡದಲ್ಲಿ ಜಮೀನು ವಿವಾದ : ದಲಿತರ 35 ಮನೆಗಳಿಗೆ ಬೆಂಕಿ-ಕೃತ್ಯದ ಎಸ್‌ಐಟಿ ತನಿಖೆಗೆ ಆದೇಶ

KannadaprabhaNewsNetwork |  
Published : Sep 20, 2024, 01:43 AM ISTUpdated : Sep 20, 2024, 05:21 AM IST
ಬಿಹಾರ | Kannada Prabha

ಸಾರಾಂಶ

ಬಿಹಾರದ ನವಾಡ ಜಿಲ್ಲೆಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ದಲಿತರ 35 ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಲ್ಲಿ 15 ಜನರನ್ನು ಬಂಧಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  ನವಾಡ : ಬಿಹಾರದ ನವಾಡ ಜಿಲ್ಲೆಯಲ್ಲಿ ದಲಿತರ 35 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಬುಧವಾರ ಸಂಜೆ ಮಾಂಝಿ ತೋಲಾ ಎಂಬಲ್ಲಿ ಘಟನೆ ನಡೆದಿದ್ದು, ಜಮೀನು ವಿವಾದವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. 

ಈ ಸಂಬಂಧ 15 ಜನರನ್ನು ಬಂಧಿಸಲಾಗಿದೆ. ದಲಿತರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಬಿಹಾರದಲ್ಲಿ ರಾಜಕೀಯ ವಿವಾದ ಸೃಷ್ಟಿಸಿದೆ. ಖುದ್ದು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು (ಎಡಿಜಿಪಿ) ಸ್ಥಳಕ್ಕೆ ಹೋಗಿ ತನಿಖೆಯ ಉಸ್ತುವಾರಿ ವಹಿಸಬೇಕು ಹಾಗೂ ಶಾಂತಿ ಕಾಪಾಡಬೇಕು. ಕೃತ್ಯದ ಎಸ್‌ಐಟಿ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಆದೇಶಿಸಿದ್ದಾರೆ.

ಆದರೆ ಆರ್‌ಜೆಡಿ ನೇತಾರ ಲಾಲು ಯಾದವ್‌ ಹಾಗೂ ಕಾಂಗ್ರೆಸ್‌ ನಾಯಕರು, ‘ಬಿಹಾರ ಜಂಗಲ್‌ ರಾಜ್ಯವಾಗಿ ಮಾರ್ಪಾಡಾಗಿದೆ. ನಿತೀಶ್‌ ಕುಮಾರ್‌ ಅವರು ಆಡಳಿತದಲ್ಲಿ ವಿಫಲರಾಗಿದ್ದಾರೆ’ ಎಂದು ಕಿಡಿಕಾರಿದ್ದಾರೆ. ಆದರೆ ಕೇಂದ್ರ ಮಂತ್ರಿ ಜೀತನ್ ರಾಂ ಮಾಂಝಿ ಇದಕ್ಕೆ ತಿರುಗೇಟು ನೀಡಿದ್ದು, ಬಂಧಿತರಲ್ಲಿ ಶೇ.90 ಜನರು ಆರ್‌ಜೆಡಿಯವರು ಎಂದಿದ್ದಾರೆ.

ಆಗಿದ್ದೇನು?:ಬುಧವಾರ ಸಂಜೆ 7.30ರ ಸುಮಾರಿಗೆ ಮಾಂಝಿ ಟೋಲಾಗೆ ಬಂದ ಉದ್ರಿಕ್ತರ ಗುಂಪು ದಲಿತರ ಅರೆ-ಪಕ್ಕಾ ಮನೆಗಳಿಗೆ ಬೆಂಕಿ ಹಚ್ಚಿದೆ. ಮನೆಗಳಿಗೆ ಬೆಂಕಿ ಹಚ್ಚುವಾಗ ಗಾಳಿಯಲ್ಲಿ ಗುಂಡನ್ನೂ ಹಾರಿಸಿದೆ. ಆದರೆ ಸುದೈವವಶಾತ್‌ ಯಾರೂ ಗಾಯಗೊಂಡಿಲ್ಲ. ಘಟನೆಗೆ ಜಮೀನು ವಿವಾದವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಮತ್ತೆ ಪರಿಸ್ಥಿತಿ ಭುಗಿಲೆದ್ದಂತೆ ತಡೆಯಲು ಹೆಚ್ಚಿನ ಪೊಲೀಸ್ ತುಕಡಿಯನ್ನು ಪ್ರದೇಶದಲ್ಲಿ ನಿಯೋಜಿಸಲಾಗಿದೆ. ಸಂತ್ರಸ್ತರಿಗೆ ತಾತ್ಕಾಲಿಕ ಟೆಂಟ್‌ಗಳನ್ನು ಸ್ಥಾಪಿಸಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಆಪರೇಷನ್‌ ಸಿಂದೂರ 1ನೇ ದಿನವೇ ಭಾರತ ಸೋತಿತು: ಚವಾಣ್‌
ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌