ಪತ್ನಿ ಕೊಂದು ಮನೆಯಲ್ಲಿಟ್ಟ, 3 ದಿನ ಬಳಿಕ ನೆರೆಮನೆಯವರ ಮೂಲಕ ಪೊಲೀಸರಿಗೆ ಮಾಹಿತಿ

KannadaprabhaNewsNetwork |  
Published : Mar 04, 2024, 01:15 AM IST
ದಂಪತಿ | Kannada Prabha

ಸಾರಾಂಶ

ಪತ್ನಿಯನ್ನು ಸ್ವತಃ ಕೊಂದು ಮನೆಯಲ್ಲಿಟ್ಟುಕೊಂಡಿದ್ದ ಪತಿ ಮೂರು ದಿನಗಳ ಬಳಿಕ ತಪ್ಪೊಪ್ಪಿಕೊಂಡು ತನ್ನನ್ನು ಪೊಲೀಸರಿಗೆ ಕೂಗಾಡಿಕೊಂಡ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ.

ನವದೆಹಲಿ: ಕೌಟುಂಬಿಕ ಕಲಹ ತಾರಕಕ್ಕೇರಿದ ಕಾರಣ ಪತ್ನಿಯನ್ನು ಕೊಂದು ತನ್ನನ್ನು ಪೊಲೀಸರಿಗೆ ಒಪ್ಪಿಸುವಂತೆ ಸ್ವತಃ ಪತಿ ಕೂಗಾಡಿಕೊಂಡ ಘಟನೆ ಗಾಜಿಯಾಬಾದ್‌ನ ಫ್ಲಾಟ್‌ವೊಂದರಲ್ಲಿ ನಡೆದಿದೆ.

ಪತಿ ನರೇಶ್‌ ಕುಮಾರ್‌ ತನ್ನ ಪತ್ನಿ ಸುನೀತಾರನ್ನು (51) ಕೊಂದು ಮೂರು ದಿನಗಳವರೆಗೆ ಶವವನ್ನು ಮನೆಯಲ್ಲಿಯೇ ಇರಿಸಿದ್ದ.

ಶವ ದುರ್ವಾಸನೆ ಬೀರಲು ಪ್ರಾರಂಭವಾದ ಬಳಿಕ ಮನೆಯ ಹೊರಗೆ ಬಂದು ಪತ್ನಿಯನ್ನು ತಾನೇ ಕೊಂದಿದ್ದು, ಪೊಲೀಸರಿಗೊಪ್ಪಿಸುವಂತೆ ಕಿರುಚಾಡಿದ್ದಾನೆ.

ಬಳಿಕ ಪೊಲೀಸರು ಬಂದು ಆತನನ್ನು ಬಂಧಿಸಿ ಕರೆದೊಯ್ದಿದ್ದಾರೆ. ಬಳಿಕ ಪತ್ನಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಆಕೆಯ ಪೋಷಕರಿಗೆ ಒಪ್ಪಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಇಂಡಕ್ಷನ್‌ ಸ್ಟವ್‌ಗಳಿಗೆ ಭಾರೀ ಡಿಮ್ಯಾಂಡ್‌: 300% ಬೇಡಿಕೆ ಹೆಚ್ಚಳ!
ಮುಸ್ಲಿಂ ಹುಡುಗನ ಜತೆ ರುದ್ರಾಕ್ಷಿ ಹುಡುಗಿ ಮೊನಾಲಿಸಾ ಮದುವೆ!