ತಡರಾತ್ರಿ ಕಾರ್ಯಾಚರಣೆ ಮೂಲಕ ಕೈ ತುಂಡಾಗಿದ್ದ ಯೋಧನ ರಕ್ಷಣೆ!

KannadaprabhaNewsNetwork |  
Published : Apr 13, 2024, 01:02 AM ISTUpdated : Apr 13, 2024, 05:35 AM IST
ಆರ್ಮಿ | Kannada Prabha

ಸಾರಾಂಶ

ಮುಂಚೂಣಿ ಗಡಿ ಪ್ರದೇಶದಲ್ಲಿ ಕಾರ್ಯನಿರ್ವಹಣೆ ವೇಳೆ ಕೈ ತುಂಡಾಗಿದ್ದ ಯೋಧನೊಬ್ಬನನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಯು ತಡರಾತ್ರಿ ಕಾರ್ಯಾಚರಣೆ ಮೂಲಕ ರಕ್ಷಿಸಿದ ಘಟನೆ ಲಡಾಖ್‌ನಲ್ಲಿ ನಡೆದಿದೆ.

ನವದೆಹಲಿ: ಮುಂಚೂಣಿ ಗಡಿ ಪ್ರದೇಶದಲ್ಲಿ ಕಾರ್ಯನಿರ್ವಹಣೆ ವೇಳೆ ಕೈ ತುಂಡಾಗಿದ್ದ ಯೋಧನೊಬ್ಬನನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಯು ತಡರಾತ್ರಿ ಕಾರ್ಯಾಚರಣೆ ಮೂಲಕ ರಕ್ಷಿಸಿದ ಘಟನೆ ಲಡಾಖ್‌ನಲ್ಲಿ ನಡೆದಿದೆ.

ಯಂತ್ರವೊಂದರಲ್ಲಿ ಕೆಲಸ ಮಾಡುವ ವೇಳೆ ಯೋಧನ ಕೈ ತುಂಡರಿಸಿತ್ತು. ಕೂಡಲೇ ಗಾಯಾಳು ಯೋಧನನ್ನು ಮೊದಲಿಗೆ ಲೇಹ್‌ ವಾಯುನೆಲೆಗೆ ಕರೆತರಲಾಯಿತು. ಅಲ್ಲಿಂದ ದೆಹಲಿಗೆ ವಾಯುಪಡೆಯ ಸಿ-130 ಜೆ ವಿಮಾನದ ಮೂಲಕ ಸ್ಥಳಾಂತರಿಸಿ ಸೇನಾ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಘಟನೆ ನಡೆದಾಗಿನಿಂದ ಕೇವಲ 4 ಗಂಟೆಗಳ ಅವಧಿಯಲ್ಲಿ ಯೋಧನನ್ನು ದೆಹಲಿಗೆ ಕರೆತರಲಾದ ಕಾರಣ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ತುಂಡರಿಸಿದ್ದ ಭಾಗವನ್ನು ಮರಳಿ ಜೋಡಿಸಲಾಗಿದೆ. ಸೇನೆ ಮತ್ತು ವಾಯುಪಡೆಯ ಸಮನ್ವಯತೆ ಇದನ್ನು ಸಾಧ್ಯವಾಗಿಸಿದೆ ಎಂದು ಭಾರತೀಯ ವಾಯುಪಡೆ ಹೇಳಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಗದ್ದಲದ ಮಧ್ಯೆಯೇ ‘ಜಿ ರಾಮ್‌ ಜಿ’ ವಿಧೇಯಕ ಲೋಕಸಭೇಲಿ ಮಂಡನೆ
ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಧ್ವಂಸ