ಥಿಯೇಟರ್‌ಗೆ ಬೆಂಕಿ ಹಾಕಿದರೆ ಅಗ್ನಿಶಾಮಕ ಬಳಸಿ: ಸುಪ್ರೀಂ

Published : Jun 10, 2025, 05:10 AM IST
Kamal-Haasan-Movie-Thug-Life-Record

ಸಾರಾಂಶ

‘ಚಿತ್ರಮಂದಿರಕ್ಕೆ ಬೆಂಕಿ ಹಚ್ಚುವುದಾಗಿ ಕೆಲವು ಸಂಘಟನೆಗಳು ಬೆದರಿಕೆ ಹಾಕುತ್ತಿವೆ’ ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ, ‘ಬೆಂಕಿ ನಂದಿಸುವ ಉಪಕರಣಗಳನ್ನು ಅಳವಡಿಸಿ’ ಎಂಬ ಸಲಹೆಯನ್ನೂ ಕೋರ್ಟ್‌ ನೀಡಿದೆ

ನವದೆಹಲಿ: ಕನ್ನಡ ಭಾಷೆ ಕುರಿತ ನಟ ಕಮಲ್‌ ಹಾಸನ್‌ ಅವರ ಹೇಳಿಕೆಯಿಂದ ವಿವಾದಕ್ಕೊಳಗಾಗಿರುವ ನಟ ಕಮಲ್‌ ಹಾಸನ್‌ ಅವರ ‘ಥಗ್‌ ಲೈಫ್‌’ ಸಿನಿಮಾವನ್ನು ಕರ್ನಾಟಕದ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಬೇಕು ಹಾಗೂ ಚಿತ್ರ ಪ್ರದರ್ಶನದ ವೇಳೆ ರಕ್ಷಣೆ ನೀಡಬೇಕು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಆದರೆ ಇದೇ ವೇಳೆ, ‘ಚಿತ್ರಮಂದಿರಕ್ಕೆ ಬೆಂಕಿ ಹಚ್ಚುವುದಾಗಿ ಕೆಲವು ಸಂಘಟನೆಗಳು ಬೆದರಿಕೆ ಹಾಕುತ್ತಿವೆ’ ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ, ‘ಬೆಂಕಿ ನಂದಿಸುವ ಉಪಕರಣಗಳನ್ನು ಅಳವಡಿಸಿ’ ಎಂಬ ಸಲಹೆಯನ್ನೂ ಕೋರ್ಟ್‌ ನೀಡಿದೆ.

ಪ್ರಕರಣದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಬೆಂಗಳೂರಿನ ಎಂ.ಮಹೇಶ್‌ ರೆಡ್ಡಿ ಅವರು ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಮೂರ್ತಿ ಪ್ರಶಾಂತ್‌ ಕುಮಾರ್‌ ಮಿಶ್ರಾ ಮತ್ತು ನ್ಯಾಯಮೂರ್ತಿ ಮನಮೋಹನ್‌ ಅವರಿದ್ದ ಪೀಠವು ಪ್ರಕರಣದ ತುರ್ತು ವಿಚಾರಣೆಗೆ ನಿರಾರಿಸಿ, ಜೂ.13ರ ದಿನ ನಿಗದಿ ಮಾಡಿತು.

ಅಗ್ನಿನಂದಕ ಅಳವಡಿಸಿ ಎಂದ ಕೋರ್ಟ್‌:

ಅರ್ಜಿದಾರರ ಪರ ವಾದಿಸಿದ ವಕೀಲ ನವಪ್ರೀತ್‌ ಕೌರ್ ಅವರು, ‘ಕರ್ನಾಟಕದಲ್ಲಿ ಥಗ್‌ಲೈಫ್‌ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳಿಗೆ ಬೆಂಕಿ ಇಡಲಾಗುವುದು ಎಂದು ಕೆಲ ಸಂಘಟನೆಗಳು ಬಹಿರಂಗ ಎಚ್ಚರಿಕೆ ನೀಡಿವೆ. ಈ ಮೂಲಕ ಸಿನಿಮಾ ಪ್ರದರ್ಶನಕ್ಕೆ ಕರ್ನಾಟಕದಲ್ಲಿ ಪರೋಕ್ಷವಾಗಿ ನಿಷೇಧ ಹೇರಲಾಗಿದೆ. ಹೀಗಾಗಿ ಚಿತ್ರಮಂದಿರಗಳಿಗೆ ರಕ್ಷಮೆ ನೀಡುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಆಗ ಒಂದು ಹಂತದಲ್ಲಿ ನ್ಯಾ। ಮಿಶ್ರಾ ಅವರು, ‘ಬೆಂಕಿ ನಂದಿಸುವ ಉಪಕರಣಗಳನ್ನು ಅಳವಡಿಸಿ’ ಎಂದು ಹೇಳಿದ್ದಲ್ಲದೆ, ‘ಪ್ರಕರಣಕ್ಕೆ ಸಂಬಂಧಿಸಿ ಚಿತ್ರಮಂದಿರಗಳ ಸಂಘವು ಹೈಕೋರ್ಟ್‌ ಮೊರೆ ಹೋಗಲಿ’ ಎಂದು ತಿಳಿಸಿದರು.

ಆಗ ನ್ಯಾಯವಾದಿ ಕೌರ್‌ ಅ‍ವರು, ‘ಸಿನಿಮಾ ನಿರ್ಮಾಪಕರು ಹೈಕೋರ್ಟ್‌ಗೂ ಮೊರೆ ಹೋಗಿದ್ದರು. ಆದರೆ ಅಲ್ಲಿ ಅವರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಬದಲಾಗಿ ಬೆದರಿಕೆ ಹಾಕುತ್ತಿರುವವರ ಜತೆಗೆ ರಾಜಿ ಮಾಡಿಕೊಳ್ಳುವಂತೆ ನಟನಿಗೆ ಸಲಹೆ ನೀಡಲಾಗಿದೆ’ ಎಂದು ತಿ‍ಳಿಸಿದರು.

ಆ ಬಳಿಕ ನ್ಯಾಯಾಲಯವು ಈ ಕುರಿತ ಅರ್ಜಿಯನ್ನು ಶುಕ್ರವಾರ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು.

ಏನಿದು ಪ್ರಕರಣ?:

ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ ಎಂದು ನಟ ಕಮಲ್‌ ಹಾಸನ್‌ ನೀಡಿದ್ದ ಹೇಳಿಕೆಯು ಕರ್ನಾಟಕದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿದೆ. ಈ ಹೇಳಿಕೆಗಾಗಿ ಅವರು ಕ್ಷಮೆ ಕೋರಬೇಕು, ಇಲ್ಲದಿದ್ದರೆ ಥಗ್‌ ಲೈಫ್ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಕನ್ನಡಪರ ಸಂಘಟನೆಗಳು ಬಹಿರಂಗ ಎಚ್ಚರಿಕೆ ನೀಡಿದ್ದವು. ಈ ಸಿನಿಮಾ ಜೂ.5ರಂದು ಬಿಡುಗಡೆಯಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಗದ್ದಲದ ಮಧ್ಯೆಯೇ ‘ಜಿ ರಾಮ್‌ ಜಿ’ ವಿಧೇಯಕ ಲೋಕಸಭೇಲಿ ಮಂಡನೆ
ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಧ್ವಂಸ