ಜು.30ಕ್ಕೆ ಕೇರಳಕ್ಕೆ ರೆಡ್‌ ಅಲರ್ಟ್‌ ನೀಡಿದ್ದೆವು: ಐಎಂಡಿ ಮುಖ್ಯಸ್ಥ ಮೃತ್ಯುಂಜಯ ಮೊಹಪಾತ್ರ

KannadaprabhaNewsNetwork |  
Published : Aug 02, 2024, 12:50 AM ISTUpdated : Aug 02, 2024, 07:47 AM IST
 ಐಎಂಡಿ | Kannada Prabha

ಸಾರಾಂಶ

  ‘ಜುಲೈ 30ರ ಬೆಳಿಗ್ಗೆ ಕೇರಳಕ್ಕೆ ರೆಡ್‌ ಅಲರ್ಟ್‌ ನೀಡಿದ್ದೆವು’ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುಖ್ಯಸ್ಥ ಮೃತ್ಯುಂಜಯ ಮೊಹಪಾತ್ರ ಹೇಳಿದ್ದಾರೆ.

ನವದೆಹಲಿ: ‘ಜು. 23ರಂದೇ ವಯನಾಡಿಗೆ ಸಂಭವನೀಯ ಪ್ರಾಕೃತಿಕ ವಿಪತ್ತಿನ ಬಗ್ಗೆ ಮುನ್ಸೂಚನೆ ನೀಡಿದ್ದೆವು. ಆದರೆ ಕೇರಳ ಎಚ್ಚೆತ್ತುಕೊಂಡಿರಲಿಲ್ಲ’ ಎಂದು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ ಬೆನ್ನಲ್ಲೇ, ‘ಜುಲೈ 30ರ ಬೆಳಿಗ್ಗೆ ಕೇರಳಕ್ಕೆ ರೆಡ್‌ ಅಲರ್ಟ್‌ ನೀಡಿದ್ದೆವು’ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುಖ್ಯಸ್ಥ ಮೃತ್ಯುಂಜಯ ಮೊಹಪಾತ್ರ ಹೇಳಿದ್ದಾರೆ.

‘20 ಸೆಂ.ಮೀ ತನಕ ಭಾರೀ ಮಳೆಯಾಗಬಹುದು ಎನ್ನುವ ಸೂಚನೆಯೊಂದಿಗೆ ಜು.30ರ ಬೆಳಿಗ್ಗೆ ರೆಡ್ ಅಲರ್ಟ್‌ ನೀಡಿದ್ದೆವು. ಆರೆಂಜ್ ಅಲರ್ಟ್‌ ಎಂದರೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸಿದ್ಧರಾಗಿರಿ ಎಂದರ್ಥ. 

ರೆಡ್‌ ಅಲರ್ಟ್‌ ಬರುವ ತನಕ ಕಾಯಬಾರದು’ ಎಂದಿದ್ದಾರೆ. ಆದರೆ ಕೇರಳ ಸಿಎಂ ಪಿಣರಾಯಿ ವಿಜಯನ್ ಈ ವಿಚಾರವನ್ನು ಅಲ್ಲಗಳೆದಿದ್ದು, ‘ಐಎಂಡಿ ಆರೆಂಜ್ ಅಲರ್ಟ್‌ ಮಾತ್ರವೇ ಘೋಷಿಸಿತ್ತು’ ಎಂದಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಗದ್ದಲದ ಮಧ್ಯೆಯೇ ‘ಜಿ ರಾಮ್‌ ಜಿ’ ವಿಧೇಯಕ ಲೋಕಸಭೇಲಿ ಮಂಡನೆ
ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಧ್ವಂಸ