ಪರಿಣಾಮ ನೆಟ್ಟಗಿರದು: ಅಧಿಕಾರಿಗಳಿಗೆ ಧಮಕಿ

KannadaprabhaNewsNetwork |  
Published : Mar 16, 2024, 01:48 AM ISTUpdated : Mar 16, 2024, 07:53 AM IST
ಕೆ.ಟಿ.ರಾಮರಾವ್‌ | Kannada Prabha

ಸಾರಾಂಶ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಸೋದರಿ ಕವಿತಾ ಅವರ ಬಂಧನ ಖಂಡಿಸಿ ಬಿಆರ್‌ಎಸ್‌ ನಾಯಕ ಕೆ.ಟಿ.ರಾಮರಾವ್‌ ಅಧಿಕಾರಿಗಳಿಗೆ ಪರಿಣಾಮ ನೆಟ್ಟಿಗಿರದು ಎಂದು ಧಮಕಿ ಹಾಕಿದ ಘಟನೆ ಶುಕ್ರವಾರ ನಡೆಯಿತು.

ಹೈದರಾಬಾದ್: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಸೋದರಿ ಕವಿತಾ ಅವರ ಬಂಧನ ಖಂಡಿಸಿ ಬಿಆರ್‌ಎಸ್‌ ನಾಯಕ ಕೆ.ಟಿ.ರಾಮರಾವ್‌ ಅಧಿಕಾರಿಗಳಿಗೆ ಪರಿಣಾಮ ನೆಟ್ಟಿಗಿರದು ಎಂದು ಧಮಕಿ ಹಾಕಿದ ಘಟನೆ ಶುಕ್ರವಾರ ನಡೆಯಿತು. 

ಅಧಿಕಾರಿಗಳು ಕವಿತಾ ಅವರನ್ನು ಬಂಧಿಸಲು ಮುಂದಾದ ವೇಳೆ, ‘ಸುಪ್ರೀಂ ಕೋರ್ಟಿನಲ್ಲಿ ಕವಿತಾ ವಿರುದ್ದ ಯಾವುದೇ ದಬ್ಬಾಳಿಕೆ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಇ.ಡಿ ವಾಗ್ದಾನ ನೀಡಿ, ಇದೀಗ ಆ ವಾಗ್ದಾನ ಉಲ್ಲಂಘಿಸಿದೆ. 

ಜೊತೆಗೆ ಒಂದು ಕಡೆಯಿಂದ ಮತ್ತೊಂದು ಕಡೆ ಕರೆದೊಯ್ಯಲು ವಾರೆಂಟ್‌ ನೀಡಿಲ್ಲ. ಬಂಧನ ಕಾನೂನು ಬಾಹಿರ’ ಎಂದು ವಾಗ್ವಾದ ನಡೆಸಿದ್ದಾರೆ.

ಈ ವೇಳೆ ಅಧಿಕಾರಿಗಳು ಕೂಡಾ ರಾಮ್‌ರಾವ್‌ ಜೊತೆ ಮಾತಿನ ಚಕಮಕಿ ನಡೆಸಿ ಕಾನೂನು ಪ್ರಕಾರವೇ ನಡೆದುಕೊಂಡಿರುವುದಾಗಿ ಹೇಳಿ ಕವಿತಾರನ್ನು ವಶಕ್ಕೆ ಪಡೆದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ