;Resize=(412,232))
ನವದೆಹಲಿ: ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಅರ್ಹತೆ (ಮೆರಿಟ್) ಆಧರಿಸಿ ಪ್ರವೇಶ ನೀಡುವ ಮೆರಿಟ್ ವ್ಯವಸ್ಥೆಯೇ ಸರಿ ಇಲ್ಲ. ಇದು ಕೇವಲ ಮೇಲ್ವರ್ಗದವರಿಗೆ ಮಾತ್ರ ಅನುಕೂಲ ಆಗುವಂತಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಅಂತೆಯೇ, ಅಸ್ಪೃಶ್ಯರಿಗೆ ಸಾರ್ವಜನಿಕ ನೀರಿನ ಮೂಲಗಳನ್ನು ಬಳಸಲು ಅವಕಾಶ ಒದಗಿಸಲು ಡಾ। ಬಿ.ಆರ್. ಅಂಬೇಡ್ಕರ್ ಅವರು 1927ರ ಮಾ.20ರಂದು ಕೈಗೊಂಡ ಮಹದ ಸತ್ಯಾಗ್ರಹವನ್ನು ಉಲ್ಲೇಖಿಸಿದ ರಾಹುಲ್, ‘ಅದು ಸಮಾನತೆ ಮತ್ತು ಗೌರವಕ್ಕಾಗಿ ನಡೆದ ಹೋರಾಟವಾಗಿತ್ತು. 98 ವರ್ಚಗಳ ಹಿಂದೆ ಆರಂಭವಾದ ಈ ಸಮರ ಈಗಲೂ ಮುಂದುವರೆಯುತ್ತದೆ’ ಎಂದರು.
ಬಿಜೆಪಿ ಟೀಕೆ:ರಾಹುಕ್ ಗಾಂಧಿಯವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, ‘ತಾನೇನು ಮಾತಾಡುತ್ತಿದ್ದೇನೆಂದು ರಾಹುಲ್ಗೆ ತಿಳಿದಿದೆಯೇ? ಬಡ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗದಿಂದ ಬಂದು ಅರ್ಹತೆ ಹಾಗೂ ಪರಿಶ್ರಮದಿಂದ ಜೀವನದಲ್ಲಿ ಮೇಲೆಬಂದ ಲಕ್ಷಾಂತರ ಮಂದಿಗೆ ಅವಮಾನ ಮಾಡಿದ್ದಾರೆ. ಆದರೆ ರಾಜವಂಶದವರಿಗೆ ಇದೆಲ್ಲ ಹೇಗೆ ಅರ್ಥವಾದೀತು?’ ಎಂದು ವಾಗ್ದಾಳಿ ನಡೆಸಿದ್ದಾರೆ.