ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಲ್ಲಿ ಸೋಲಿಸಲು ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಭಾರಿ ಯೋಜನೆ ರೂಪಿಸುತ್ತಿದೆ. ಇದಕ್ಕಾಗಿ ಬಿಜೆಪಿಯ ಹಳೆಯ ಸ್ನೇಹಿತ ಅಥವಾ ಹೊಸ ಮುಖವನ್ನು ಕಣಕ್ಕಿಳಿಸಲು ಕೂಡ ಯೋಜಿಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಇಂಗ್ಲಿಷ್ ಟೀವಿ ಚಾನೆಲ್ ಒಂದು ವರದಿ ಮಾಡಿದೆ.
2004ನ್ನು ಹೊರತುಪಡಿಸಿದರೆ 1991ರಿಂದಲೂ ವಾರಾಣಸಿಯಲ್ಲಿ ಬಿಜೆಪಿ ಜಯಗಳಿಸುತ್ತಿದೆ.ನಿತೀಶ್ ಕುಮಾರ್ ಅವರು ಈ ಹಿಂದೆ ಬಿಜೆಪಿಯ ಮೈತ್ರಿಕೂಟದಲ್ಲಿದ್ದರು. ಆದರೆ ಇದೀಗ ಮೈತ್ರಿಕೂಟವನ್ನು ತೊರೆದಿದ್ದು, ಪ್ರಧಾನಿ ಹುದ್ದೆಗೇರಲು ಅರ್ಹ ಅಭ್ಯರ್ಥಿ ಎಂದು ಗುರುತಿಸಿಕೊಂಡಿದ್ದಾರೆ. ಪ್ರಿಯಾಂಕ ಗಾಂಧಿ ಈವರೆಗೂ ಒಂದೂ ಚುನಾವಣೆಯನ್ನೂ ಎದುರಿಸಿಲ್ಲ. 2019ರಲ್ಲೇ ಇವರು ವಾರಾಣಸಿಯಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಡಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಮೋದಿ ವಿರುದ್ಧ ಸ್ಪರ್ಧೆಯ ಪ್ರಶ್ನೆ ಬಂದಾಗೆಲ್ಲಾ ಪ್ರಿಯಾಂಕ ಸಕಾರಾತ್ಮಕವಾಗಿ ಉತ್ತರಿಸಿದ್ದಾರೆ. ಹೀಗಾಗಿ ಮೋದಿ ಅವರನ್ನು ಸೋಲಿಸಲು ಈ ಇಬ್ಬರು ನಾಯಕರಲ್ಲಿ ಒಬ್ಬರನ್ನು ಕಣಕ್ಕಿಳಿಸಲಾಗುತ್ತದೆ ಎನ್ನಲಾಗಿದೆ.