ಐರೋನ್‌ಡೋಂನಂಥ ವ್ಯವಸ್ಥೆ ಭೇದಿಸುವ ಭಾರತದ ಹೈಪರ್‌ ಸಾನಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

KannadaprabhaNewsNetwork |  
Published : Nov 18, 2024, 12:02 AM ISTUpdated : Nov 18, 2024, 06:30 AM IST
ಕ್ಷಿಪಣಿ | Kannada Prabha

ಸಾರಾಂಶ

ಇಸ್ರೇಲ್‌ನ ಅತ್ಯಂತ ಬಲಿಷ್ಠ ‘ಐರನ್‌ಡೋಂ’ ಸೇರಿ ವಿವಿಧ ದೇಶಗಳ ವಾಯುರಕ್ಷಣಾ ವ್ಯವಸ್ಥೆಯನ್ನು ಭೇದಿಸುವ ಸಾಮರ್ಥ್ಯ ಹೊಂದಿರುವ ಹೈಪರ್‌ಸಾನಿಕ್‌ ಕ್ಷಿಪಣಿ ಪರೀಕ್ಷೆಯನ್ನು ಭಾರತ ಭಾನುವಾರ ಯಶಸ್ವಿಯಾಗಿ ನಡೆಸಿದೆ. ಈ ಮೂಲಕ ಇಂಥ ಕ್ಷಿಪಣಿ ಹೊಂದಿರುವ ವಿಶ್ವದ ಕೆಲವೇ ಕೆಲವು ದೇಶಗಳ ಸಾಲಿಗೆ ಭಾರತ ಸೇರಿದೆ.

ನವದೆಹಲಿ: ಇಸ್ರೇಲ್‌ನ ಅತ್ಯಂತ ಬಲಿಷ್ಠ ‘ಐರನ್‌ಡೋಂ’ ಸೇರಿ ವಿವಿಧ ದೇಶಗಳ ವಾಯುರಕ್ಷಣಾ ವ್ಯವಸ್ಥೆಯನ್ನು ಭೇದಿಸುವ ಸಾಮರ್ಥ್ಯ ಹೊಂದಿರುವ ಹೈಪರ್‌ಸಾನಿಕ್‌ ಕ್ಷಿಪಣಿ ಪರೀಕ್ಷೆಯನ್ನು ಭಾರತ ಭಾನುವಾರ ಯಶಸ್ವಿಯಾಗಿ ನಡೆಸಿದೆ. ಈ ಮೂಲಕ ಇಂಥ ಕ್ಷಿಪಣಿ ಹೊಂದಿರುವ ವಿಶ್ವದ ಕೆಲವೇ ಕೆಲವು ದೇಶಗಳ ಸಾಲಿಗೆ ಭಾರತ ಸೇರಿದೆ.

ಇದರ ಯಶಸ್ವಿ ಉಡ್ಡಯನದ ಬೆನ್ನಲ್ಲೇ, ‘ಇದೊಂದು ಐತಿಹಾಸಿಕ ಸಾಧನೆ’ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಬಣ್ಣಿಸಿದ್ದಾರೆ.

ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿರುವ ಈ ಕ್ಷಿಪಣಿಯನ್ನು ಭಾನುವಾರ ಒಡಿಶಾದ ಕರಾವಳಿ ತೀರದಲ್ಲಿ ಯಶಸ್ವಿಯಾಗಿ ಪ್ರಯೋಗಿಸಲಾಯಿತು. ಈ ಕ್ಷಿಪಣಿ 1500 ಕಿ.ಮೀ.ಗಿಂತಲೂ ಹೆಚ್ಚಿನ ದೂರದವರೆಗೆ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಶಕ್ತಿ ಹೊಂದಿದೆ.

ಇದರ ಮಹತ್ವವೇನು?:

ಸಾಮಾನ್ಯವಾಗಿ ಹೈಪರ್‌ಸಾನಿಕ್‌ ಕ್ಷಿಪಣಿಗಳು ಸಾಂಪ್ರದಾಯಿಕ ಮತ್ತು ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತು ಶಬ್ದಕ್ಕಿಂತ 5 ಪಟ್ಟು ವೇಗದಲ್ಲಿ ಅಂದರೆ ಗಂಟೆಗೆ 6000 ಕಿ.ಮೀ. ಗಿಂತಲೂ ಹೆಚ್ಚಿನ ವೇಗದಲ್ಲಿ ಸಾಗಬಲ್ಲ ಸಾಮರ್ಥ್ಯ ಹೊಂದಿರುತ್ತದೆ. ಆದರೆ ಕೆಲವು ಹೈಪರ್‌ಸಾನಿಕ್‌ ಕ್ಷಿಪಣಿಗಳು ಶಬ್ದಕ್ಕಿಂತ 15 ಪಟ್ಟು ಹೆಚ್ಚು ವೇಗದಲ್ಲೂ ಸಾಗಬಲ್ಲದಾಗಿರುತ್ತವೆ.

ಕ್ಷಿಪಣಿಯನ್ನು ಉಡ್ಡಯನದ ಬಳಿಕ ವಿವಿಧ ಹಂತದಲ್ಲಿ ವಿವಿಧ ಕೇಂದ್ರಗಳ ಮೂಲಕ ನಿಗಾ ವಹಿಸಲಾಗಿದ್ದು ಈ ವೇಳೆ ಕ್ಷಿಪಣಿ ತನ್ನ ಎಲ್ಲಾ ಗುರಿಗಳನ್ನೂ ಮುಟ್ಟಿದೆ ಎಂದು ಡಿಆರ್‌ಡಿಒ ಹೇಳಿದೆ.

ಯಾವ ದೇಶಗಳಲ್ಲಿದೆ?:

ಸದ್ಯ ರಷ್ಯಾ ಮತ್ತು ಚೀನಾ ಹೈಪರ್‌ಸಾನಿಕ್ ಕ್ಷಿಪಣಿಗಳ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದ್ದರೆ, ಅಮೆರಿಕ ವಿವಿಧ ಮಾದರಿಯ ಹೈಪರ್‌ಸಾನಿಕ್‌ ಕ್ಷಿಪಣಿ ಅಭಿವೃದ್ಧಿಪಡಿಸುತ್ತಿದೆ. ಉಳಿದಂತೆ ಫ್ರಾನ್ಸ್‌, ಜರ್ಮನಿ, ಆಸ್ಟ್ರೇಲಿಯ, ಜಪಾನ್‌, ಇರಾನ್‌, ಇಸ್ರೇಲ್‌ ಮೊದಲಾದ ದೇಶಗಳು ಹೈಪರ್‌ಸಾನಿಕ್‌ ಅಭಿವೃದ್ಧಿಗೆ ಯೋಜನೆ ರೂಪಿಸಿವೆ.

ಈ ಕ್ಷಿಪಣಿಯು, ಕ್ಷಿಪಣಿ ದಾಳಿ ತಡೆಯಲೆಂದೇ ಅಭಿವೃದ್ಧಿಪಡಿಸಲಾಗಿರುವ ಹಲವು ದೇಶಗಳ ವಾಯುರಕ್ಷಣಾ ವ್ಯವಸ್ಥೆಯನ್ನೂ ದಾಟಿ ದಾಳಿ ನಡೆಸಬಲ್ಲ ಸಾಮರ್ಥ್ಯ ಹೊಂದಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೈಸೂರು ಸ್ಯಾಂಡಲ್ ಸೋಪು ಉತ್ಪನ್ನ : ದಾಖಲೆ ಬರೆದ ಕೆಎಸ್‌ಡಿಎಲ್‌
ಮೇಘಾಲಯ ಮೇಲಿಲ್ಲ ಬಾಂಗ್ಲಾ ಸಂಘರ್ಷ ಪರಿಣಾಮ : ವಿಜಯ್‌