ಇರಾನ್‌ ಅಧ್ಯಕ್ಷ ಸಾವು: ಇಂದು ಭಾರತದಲ್ಲಿ ಶೋಕಾರಚಣೆ

KannadaprabhaNewsNetwork |  
Published : May 21, 2024, 12:33 AM ISTUpdated : May 21, 2024, 06:19 AM IST
ಮೃತದೇಹ | Kannada Prabha

ಸಾರಾಂಶ

ಇರಾನ್‌ ಅಧ್ಯಕ್ಷ ರೈಸಿ ಹೆಲಿಕಾಪ್ಟರ್‌ ದುರಂತದಲ್ಲಿ ಸಾವನ್ನಪ್ಪಿದ ಕಾರಣ ಮಂಗಳವಾರ ಭಾರತದಾದ್ಯಂತ ಶೋಕಾಚರಣೆ ಮಾಡಲಾಗುತ್ತಿದೆ.

ನವದೆಹಲಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ ಹಿನ್ನಲೆಯಲ್ಲಿ, ಅವರ ಗೌರವಾರ್ಥವಾಗಿ ಭಾರತದಲ್ಲಿ ಮಂಗಳವಾರ 1 ದಿನದ ಶೋಕಾಚರಣೆಗೆ ಕರೆ ನೀಡಲಾಗಿದೆ.

‘ಇರಾನ್ ಅಧ್ಯಕ್ಷರಿಗೆ ಗೌರವ ಸೂಚಕವಾಗಿ ಮಂಗಳವಾರ ಭಾರತದಾದ್ಯಂತ ಶೋಕಾಚರಣೆ ನಡೆಸಲಾಗುವುದು’ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದೆ.

‘ಶೋಕಾಚರಣೆಯ ಭಾಗವಾಗಿ, ನಿತ್ಯ ರಾಷ್ಟ್ರಧ್ವಜವನ್ನು ಹಾರಿಸುವ ಕಡೆ ಮಂಗಳವಾರ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಈ ವೇಳೆ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಜುಲೈನಲ್ಲಿ ಕೇಂದ್ರ ಸಚಿವ ಸಂಪುಟ ಪುನಾರಚನೆ
ಅಯೋಧ್ಯೆ ರಾಮನ ಹಣ ಕದ್ದವರ ಬಳಿ ಫಾರ್ಮ್‌ಹೌಸ್‌, ಸ್ಕಾರ್ಪಿಯೋ