ರಷ್ಯಾ ಸೇನೆ ಸೇರಿದ್ದ ಹಲವು ಭಾರತೀಯರ ಬಿಡುಗಡೆ: ಕೇಂದ್ರ

KannadaprabhaNewsNetwork |  
Published : Feb 27, 2024, 01:37 AM ISTUpdated : Feb 27, 2024, 10:36 AM IST
ಭಾರತೀಯರು | Kannada Prabha

ಸಾರಾಂಶ

ಭಾರತದ ಕೋರಿಕೆ ಮೇರೆಗೆ ಭಾರತೀಯ ಪ್ರಜೆಗಳ ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ತಿಳಿಸಿದೆ.

ನವದೆಹಲಿ: ಮಧ್ಯವರ್ತಿಗಳ ವಂಚನೆಯಿಂದಾಗಿ ರಷ್ಯಾಕ್ಕೆ ತೆರಳಿ ಬಲವಂತವಾಗಿ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ದೂಡಲ್ಪಟ್ಟಿದ್ದ ಹಲವು ಭಾರತೀಯರನ್ನು ರಷ್ಯಾ ಸರ್ಕಾರ ಬಿಡುಗಡೆ ಮಾಡಿದೆ ಎಂದು ಭಾರತ ಸರ್ಕಾರ ಹೇಳಿದೆ.

ಕರ್ನಾಟಕದ ಮೂವರು ಸೇರಿದಂತೆ 60ಕ್ಕೂ ಹೆಚ್ಚು ಭಾರತೀಯರು ರಷ್ಯಾದಲ್ಲಿ ವಂಚನೆಗೊಳಗಾಗಿರುವ ವಿಷಯ ಬೆಳಕಿಗೆ ಬಂದ ಬೆನ್ನಲ್ಲೇ ಸರ್ಕಾರ ಈ ಆಶಾದಾಯಕ ಸುದ್ದಿ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆ, ‘ಕೆಲ ಭಾರತೀಯರು ರಷ್ಯಾ ಸೇನೆಯಿಂದ ಮುಕ್ತಿಗೊಳಿಸುವಂತೆ ಬೇಡಿಕೆ ಇಟ್ಟಿರುವ ಪ್ರಕರಣಗಳ ಕುರಿತು ಮಾಧ್ಯಮಗಳಲ್ಲಿ ನಾವು ನಿರ್ದಿಷ್ಟವಲ್ಲದ ವರದಿಗಳನ್ನು ಗಮನಿಸಿದ್ದೇವೆ. 

ಇಂಥ ಪ್ರತಿ ಪ್ರಕರಣಗಳನ್ನೂ ನಾವು ಮಾಸ್ಕೋದಲ್ಲಿರುವ ಭಾರತೀಯ ದೂತಾವಾಸ ಕಚೇರಿ ಗಮನಕ್ಕೆ ಮತ್ತು ಭಾರತದಲ್ಲಿನ ರಷ್ಯಾ ದೂತಾವಾಸ ಕಚೇರಿಗೆ ಗಮನಕ್ಕೆ ತಂದಿದ್ದೇವೆ. 

ಈ ಪೈಕಿ ಈಗಾಗಲೇ ಹಲವು ಭಾರತೀಯರನ್ನು ಭಾರತೀಯ ಸರ್ಕಾರದ ಕೋರಿಕೆಗೆ ಮೇರೆಗೆ ರಷ್ಯಾ ಬಿಡುಗಡೆ ಮಾಡಿದೆ. ರಷ್ಯಾದಲ್ಲಿ ಸಿಕ್ಕಿಬಿದ್ದಿರುವ ಪ್ರತಿ ಭಾರತೀಯರ ಬಿಡುಗಡೆ ನಮ್ಮ ಆದ್ಯತೆಯಾಗಿರಲಿದೆ. 

ಇದೇ ವೇಳೆ ಉಕ್ರೇನ್‌ನ ಸಂಘರ್ಷಮಯ ಪ್ರದೇಶದಿಂದ ದೂರ ಇರುವಂತೆ ನಾವು ಇದೇ ವೇಳೆ ಎಲ್ಲಾ ಭಾರತೀಯರಿಗೂ ಕೋರಿಕೆ ಸಲ್ಲಿಸುತ್ತೇವೆ ಎಂದು ಹೇಳಿದೆ.

ದುಬೈನಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕನ್ನಡಿಗರು ಸೇರಿದಂತೆ 60 ಭಾರತೀಯರನ್ನ ಸಂಪರ್ಕಿಸಿದ್ದ ಮಹಾರಾಷ್ಟ್ರ ಮೂಲದ ಮಧ್ಯವರ್ತಿಯೊಬ್ಬ ಎಲ್ಲರಿಗೂ ರಷ್ಯಾ ಸೇನೆಯಲ್ಲಿ ನೌಕರಿಯ ಆಫರ್‌ ನೀಡಿದ್ದ. ಸೇನೆಯಲ್ಲಿ ಮಾಸಿಕ 1.50 ಲಕ್ಷ. ವೇತನ ಮತ್ತು 6 ತಿಂಗಳ ಬಳಿಕ ರಷ್ಯಾದ ಪೌರತ್ವದದ ಭರವಸೆಯನ್ನೂ ನೀಡಲಾಗಿತ್ತು.

ಈ ಮಾತು ನಂಬಿ ರಷ್ಯಾಕ್ಕೆ ತೆರಳಿದ್ದ ಬಳಿಕ ಅವರೆಲ್ಲಾ ತಮಗೆ ಆಫರ್‌ ನೀಡಿದ್ದು ರಷ್ಯಾ ಸೇನೆಯಲ್ಲ, ಬದಲಾಗಿ ರಷ್ಯಾ ಸೇನೆಗೆ ನೆರವು ನೀಡುವ ವ್ಯಾಗ್ನರ್‌ ಎಂಬ ಖಾಸಗಿ ಸೇನೆ ಎಂಬ ವಿಷಯ ಬೆಳಕಿಗೆ ಬಂದಿತ್ತು. 

ಜೊತೆಗೆ ಇವರನ್ನು ಉಕ್ರೇನ್‌ ವಿರುದ್ಧದ ಯುದ್ದಕ್ಕೆ ಕಳುಹಿಸಲಾಗಿತ್ತು. ಹೀಗಾಗಿ ಅವರೆಲ್ಲಾ ತಮ್ಮನ್ನು ಬಿಡುಗಡೆ ಮಾಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ