ಇಂದೋರ್‌ ಕಲುಷಿತ ನೀರು : 10 ವರ್ಷದ ಹರಕೆಗೆ ಜನಿಸಿದ 6 ತಿಂಗಳ ಕೂಸು ಸೇರಿ 10ಕ್ಕೆ ಸಾವು

KannadaprabhaNewsNetwork |  
Published : Jan 03, 2026, 02:00 AM ISTUpdated : Jan 03, 2026, 07:49 AM IST
Indore

ಸಾರಾಂಶ

ಇಲ್ಲಿನ ಭಾಗೀರಥಿಪುರದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಮೃತಪಟ್ಟವರ ಸಂಖ್ಯೆಯು10ಕ್ಕೆ ಏರಿಕೆಯಾಗಿದೆ. ಅಸ್ವಸ್ಥರ ಸಂಖ್ಯೆಯೂ 1400ಕ್ಕೆ ಏರಿಕೆಯಾಗಿದೆ. ಇದರ ನಡುವೆ, ಇಂದೋರ್‌ ಮಹಾನಗರ ಪಾಲಿಕೆಯ ಹಲವು ಅಧಿಕಾರಿಗಳನ್ನು ಮುಖ್ಯಮಂತ್ರಿ ಮೋಹನ ಯಾದವ್ ಅವರು ಶುಕ್ರವಾರ ಅಮಾನತು ಮಾಡಿದ್ದಾರೆ.

 ಇಂದೋರ್‌: ಇಲ್ಲಿನ ಭಾಗೀರಥಪುರದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಮೃತಪಟ್ಟವರ ಸಂಖ್ಯೆಯು10ಕ್ಕೆ ಏರಿಕೆಯಾಗಿದೆ. ಅಸ್ವಸ್ಥರ ಸಂಖ್ಯೆಯೂ 1400ಕ್ಕೆ ಏರಿಕೆಯಾಗಿದೆ. ಇದರ ನಡುವೆ, ಇಂದೋರ್‌ ಮಹಾನಗರ ಪಾಲಿಕೆಯ ಹಲವು ಅಧಿಕಾರಿಗಳನ್ನು ಮುಖ್ಯಮಂತ್ರಿ ಮೋಹನ ಯಾದವ್ ಅವರು ಶುಕ್ರವಾರ ಅಮಾನತು ಮಾಡಿದ್ದಾರೆ.

ಕುಡಿಯುವ ನೀರಿನ ಪೈಪ್‌ ಒಡೆದು ಹೋಗಿದ್ದು, ಅದರ ಮೇಲೆಯೇ ಇದ್ದ ಶೌಚಾಲಯದ ನೀರು ಬೆರೆತು ಸಂಪೂರ್ಣ ನೀರು ಕಲುಷಿತಗೊಂಡಿದೆ. ಪರಿಣಾಮ 9 ದಿನದಲ್ಲಿ 1400ಕ್ಕೂ ಹೆಚ್ಚಿನ ಜನರು ಅಸ್ವಸ್ಥಗೊಂಡಿದ್ದರು. ಪ್ರಸ್ತುತ 272ಕ್ಕೂ ಹೆಚ್ಚಿನ ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಸ್ಥಳೀಯರು ಮಾತ್ರ 6 ತಿಂಗಳ ಮಗು ಸೇರಿ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ವಾದಿಸಿದ್ದಾರೆ.

ವಿಷಪೂರೈಕೆ-ರಾಹುಲ್, ಖರ್ಗೆ ಕಿಡಿ:

‘ಇಂದೋರ್‌ನಲ್ಲಿ ಜನರಿಗೆ ನೀರಲ್ಲಿ ವಿಷವನ್ನು ಪೂರೈಸಲಾಗುತ್ತಿದೆ. ಈ ಬಗ್ಗೆ ಮೋದಿ ಏನೂ ಮಾತನಾಡುತ್ತಿಲ್ಲ. ಇದು ಅವರ ಬಡವರ ಪರ ಕಾಳಜಿ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಮಧ್ಯ ಪ್ರದೇಶದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ‘ಮೋದಿ ಸರ್ಕಾರ ಮತ್ತು ಬಿಜೆಪಿ ದೇಶಕ್ಕೆ ಶುದ್ಧ ನೀರು ಅಥವಾ ಶುದ್ಧ ಗಾಳಿಯನ್ನು ಒದಗಿಸುವಲ್ಲಿ ವಿಫಲವಾಗಿವೆ’ ಎಂದಿದ್ದಾರೆ.

6 ತಿಂಗಳ ಮಗು ಬಲಿ

ಇಂದೋರ್‌: ತಮಗೆ ಮಕ್ಕಳಿಲ್ಲ ಎಂದು ದಂಪತಿ 10 ವರ್ಷಗಳ ಕಾಲ ನೊಂದಿದ್ದರು. ಕೊನೆಗೆ ತಪಸ್ಸಿನ ಫಲ ಎಂಬಂತೆ ಅಯ್ಯಾನ್‌ ಎಂಬ ಮಗು 6 ತಿಂಗಳ ಹಿಂದೆ ಜನಿಸಿತ್ತು. ಆದರೆ ಇಂದೋರ್ ಕಲುಷಿತ ನೀರಿಗೆ ಈ 6 ತಿಂಗಳ ಮಗುವೂ ಸಾವನ್ನಪ್ಪಿದೆ. ಹೀಗಾಗಿ ಪೋಷಕರ ಗೋಳು ಹೇಳತೀರದಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಲಿವ್‌-ಇನ್‌ ಗೆಳತಿ ಗುಪ್ತಾಂಗಕ್ಕೆ ಸ್ಯಾನಿಟೈಸರ್‌ ಸುರಿದು ಬೆಂಕಿ
ಸಂಸದೆಯರ ಮುಂದೆಬಿಟ್ಟು ಪ್ರಧಾನಿ ಆಗಬೇಕೆ ? : ಮೋದಿ