ಪಾಕಿಸ್ತಾನದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ್‌ ಭಾಗಿ

KannadaprabhaNewsNetwork |  
Published : Oct 16, 2024, 12:39 AM ISTUpdated : Oct 16, 2024, 06:50 AM IST
 ಜೈಶಂಕರ್‌ | Kannada Prabha

ಸಾರಾಂಶ

ಪಾಕಿಸ್ತಾನದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌, ಮಂಗಳವಾರ ಸಂಜೆ ಪಾಕ್‌ ರಾಜಧಾನಿ ಇಸ್ಲಾಮಾಬಾದ್‌ಗೆ ಬಂದಿಳಿದರು.

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌, ಮಂಗಳವಾರ ಸಂಜೆ ಪಾಕ್‌ ರಾಜಧಾನಿ ಇಸ್ಲಾಮಾಬಾದ್‌ಗೆ ಬಂದಿಳಿದರು.

ಈ ವೇಳೆ ಅವರನ್ನು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಇದು ಭಾರತದ ಸಚಿವರೊಬ್ಬರು 9 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ನೀಡಿದ ಭೇಟಿ ಎಂಬುದು ವಿಶೇಷ.

ಬಳಿಕ ರಾತ್ರಿ, ಪಾಕ್‌ ಪ್ರಧಾನಿ ಶೆಹಬಾಜ್‌ ಶರೀಫ್‌ ಆಯೋಜಿಸಿದ್ದ ಔತಣಕೂಟದಲ್ಲಿ ಜೈಶಂಕರ್‌ ಭಾಗಿಯಾದರು. ಈ ವೇಳೆ ಶರೀಫ್‌ ಮತ್ತು ಜೈಶಂಕರ್‌ ಪರಸ್ಪರ ಆತ್ಮೀಯವಾಗಿ ಕೈಕುಲುಕಿದ್ದು, ಸಂಕ್ಷಿಪ್ತ ಮಾತುಕತೆ ನಡೆಸಿದರು.

ಅ.15 ಹಾಗೂ 16ರಂದು ನಡೆಯಲಿರುವ ಶೃಂಗದಲ್ಲಿ ಜೈಶಂಕರ್‌ ಭಾರತವನ್ನು ಪ್ರತಿನಿಧಿಸಿದ್ದರೂ, ಪಾಕಿಸ್ತಾನದ ಜೊತೆಗೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿಲ್ಲ. ಈ ವಿಷಯವನ್ನು ಈಗಾಗಲೇ ಭಾರತ ಸರ್ಕಾರ ಸ್ಪಷ್ಟಪಡಿಸಿದೆ.

ಭಾರತದಲ್ಲಿ ಪಾಕಿಸ್ತಾನದ ಉಗ್ರರು ನಡೆಸಿದ ಪುಲ್ವಾಮಾ ದಾಳಿಯ ಬಳಿಕ ಎರಡು ದೇಶಗಳ ನಡುವಿನ ಸಂಬಂಧದಲ್ಲಿನ ಬಿರುಕು ಇನ್ನಷ್ಟು ಆಳವಾಗಿದ್ದು, ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿಯ ಬಳಿಕ ರಾಜತಾಂತ್ರಿಕ ಸಂಬಂಧವೂ ಹದಗೆಟ್ಟಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕಾರು ಬುಕ್‌ ಮಾಡುವಾಗಲೇ ಟಿಪ್ಸ್‌ ಕೇಳುವುದಕ್ಕೆ ನಿಷೇಧ!
ರೈಲ್ವೆ ಪರಿಷ್ಕೃತ ದರ ಇಂದಿನಿಂದ ಜಾರಿಗೆ