ಗಣರಾಜ್ಯಕ್ಕೂ ಮುನ್ನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಗ್ರ ಖೆಡ್ಡಾಕ್ಕೆ

KannadaprabhaNewsNetwork |  
Published : Jan 05, 2024, 01:45 AM ISTUpdated : Jan 05, 2024, 03:39 PM IST
ಉಗ್ರ ಜಾವೇದ್‌ ಅಹ್ಮದ್‌ ಮಟ್ಟೂ | Kannada Prabha

ಸಾರಾಂಶ

11 ಉಗ್ರ ಕೃತ್ಯಗಳನ್ನು ಎಸಗಿ ದೇಶದ ಭದ್ರತಾ ಸಿಬ್ಬಂದಿಗಳಿಗೆ ಬಹುದಿನಗಳಿಂದಲೂ ಬೇಕಾಗಿದ್ದ ಹಿಜ್ಬುಲ್‌ ಮುಜಾಹಿದ್ದೀನ್‌ ಸಂಘಟನೆಯ ಉಗ್ರನನ್ನು ದೆಹಲಿಯಲ್ಲಿ ಪೊಲೀಸರು ವಿಶೇಷ ತನಿಖಾ ದಳ ಗುರುವಾರ ಬಂಧಿಸಿದೆ.

ನವದೆಹಲಿ: ದೆಹಲಿಯಲ್ಲಿ ಗಣರಾಜ್ಯೋತ್ಸವಕ್ಕೂ ಮುನ್ನ ಭರ್ಜರಿ ಉಗ್ರ ಬೇಟೆ ನಡೆದಿದೆ. ಬಹುದಿನಗಳಿಂದ ಭದ್ರತಾ ಪಡೆಗಳು ಹುಡುಕುತ್ತಿದ್ದ ಹಿಜ್ಬುಲ್‌ ಮುಜಾಹಿದೀನ್‌ ಸಂಘಟನೆಯ ಕಾಶ್ಮೀರ ಮೂಲದ ಉಗ್ರ ಜಾವೇದ್‌ ಅಹ್ಮದ್‌ ಮಟ್ಟೂನನ್ನು ಗುರುವಾರ ಬಂಧಿಸಲಾಗಿದೆ. ಮಟ್ಟೂ ಸುಮಾರು 11 ಉಗ್ರ ಕೃತ್ಯಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು, ಈತನ ತಲೆಗೆ 10 ಲಕ್ಷ ರು. ಬಹುಮಾನವಿತ್ತು. 

ಕೇಂದ್ರೀಯ ತನಿಖಾ ಸಂಸ್ಥೆಗಳು ಮತ್ತು ದೆಹಲಿ ಪೊಲೀಸ್‌ ಇಲಾಖೆಯ ವಿಶೇಷ ತನಿಖಾ ದಳ ಈ ಕಾರ್ಯಾಚರಣೆ ನಡೆಸಿದ್ದು, ಬಂಧಿತ ಮಟ್ಟೂನಿಂದ ಒಂದು ಪಿಸ್ತೂಲ್‌, 6 ಜೀವಂತ ಗುಂಡುಗಳು ಮತ್ತು ಒಂದು ಕದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.ಈತ ದೆಹಲಿಗೆ ಆಗಮಿಸುವ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದುಕೊಂಡಿದ್ದ ದೆಹಲಿ ಪೊಲೀಸರು ಈತನನ್ನು ಬಂಧಿಸಲು ಜಾಲ ಹೆಣೆದಿದ್ದರು.

ಈತ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ ನಿವಾಸಿಯಾಗಿದ್ದು, ಜಮ್ಮು-ಕಾಶ್ಮೀರದಲ್ಲಿ ಹಲವು ಉಗ್ರ ಕೃತ್ಯಗಳನ್ನು ನಡೆಸಿದ್ದ. ಹಲವು ಬಾರಿ ಅಕ್ರಮವಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ. ಈತ ಕಾಶ್ಮೀರದಲ್ಲಿ ಉಗ್ರ ಕೃತ್ಯ ಕೈಗೊಳ್ಳಲು ಶಸ್ತ್ರಾಸ್ತ್ರ ಸಾಗಣೆಗೆ ಸಂಚು ರೂಪಿಸಿದ್ದ. ಪಾಕಿಸ್ತಾನದಲ್ಲಿರುವ ಸಂಘಟನೆಯ ಮತ್ತೊಬ್ಬ ಉಗ್ರನನ್ನು ಈತ ಸಂಪರ್ಕಿಸಿದ್ದ. ಈತನ ಸುಳಿವು ನೀಡಿದವರಿಗೆ ಪೊಲೀಸ್‌ ಇಲಾಖೆ ಬಹುಮಾನ ಘೋಷಿಸಿತ್ತು.ಕಳೆದ ವರ್ಷ ಸ್ವಾತಂತ್ರ್ಯೋತ್ಸವದ ಸಮಯದಲ್ಲಿ ಈತನ ಸೋದರ ಸೋಪೋರ್‌ನ ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಗಮನ ಸೆಳೆದಿದ್ದ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕಿಚ್ಚನ ವೀರಾವೇಶ ದರ್ಶನ್ ವಿರುದ್ಧ ಅಲ್ಲ, ಪೈರಸಿ ಬಗ್ಗೆ!
ಜಿ ರಾಮ್‌ ಜಿಗೆ ರಾಜ್ಯ ಶೇ.40ರಷ್ಟು ಪಾಲು ನೀಡಲಾಗದು : ಡಿಕೆಶಿ