ಹಣದ ರಾಶಿ ಪತ್ತೆಯಾದ ಮನೆಕೆಲಸದಾಳು ಬಂಧನ

KannadaprabhaNewsNetwork |  
Published : May 08, 2024, 01:00 AM IST
ಅಕ್ರಮ ಹಣ | Kannada Prabha

ಸಾರಾಂಶ

ಮನೆಕೆಲಸದವರ ಬಳಿ ಭಾರೀ ಪ್ರಮಾಣದ ಹಣದ ರಾಶಿ ಪತ್ತೆಯಾದ ಪ್ರಕರಣ ಸಂಬಂಧ ಜಾರ್ಖಂಡ್‌ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್‌ ಆಲಂರ ಆಪ್ತ ಸಹಾಯಕ ಸಂಜೀವ್‌ ಲಾಲ್‌ ಮತ್ತು ಸಂಜೀವ್‌ಲಾಲ್‌ನ ಮನೆ ಕೆಲಸದಾಳು ಜಹಾಂಗೀರ್‌ ಆಲಂರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ರಾಂಚಿ: ಮನೆಕೆಲಸದವರ ಬಳಿ ಭಾರೀ ಪ್ರಮಾಣದ ಹಣದ ರಾಶಿ ಪತ್ತೆಯಾದ ಪ್ರಕರಣ ಸಂಬಂಧ ಜಾರ್ಖಂಡ್‌ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್‌ ಆಲಂರ ಆಪ್ತ ಸಹಾಯಕ ಸಂಜೀವ್‌ ಲಾಲ್‌ ಮತ್ತು ಸಂಜೀವ್‌ಲಾಲ್‌ನ ಮನೆ ಕೆಲಸದಾಳು ಜಹಾಂಗೀರ್‌ ಆಲಂರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ಭಾರೀ ನಗದು ಪತ್ತೆ ಪ್ರಕರಣದಲ್ಲಿ ಇಬ್ಬರನ್ನೂ ಇ.ಡಿ. ಅಧಿಕಾರಿಗಳು ಸೋಮವಾರ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಆದರೆ ಇಬ್ಬರೂ ಸೂಕ್ತ ಉತ್ತರ ನೀಡದೇ ಅಧಿಕಾರಿಗಳ ದಾರಿ ತಪ್ಪಿಸುವ ಯತ್ನ ನಡೆಸಿದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಈ ನಡುವೆ ಸಂಜೀವ್‌ ಆಲಂಗೆ ಸೇರಿದ ಇನ್ನೂ ಹಲವು ಸ್ಥಳಗಳ ಮೇಲೆ ಇ.ಡಿ. ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಈ ವೇಳೆ ಮತ್ತಷ್ಟು ನಗದು ಪತ್ತೆಯಾಗಿದೆ. ಇದರೊಂದಿಗೆ ಕಳೆದ 2 ದಿನಗಳಲ್ಲಿ ದಾಳಿ ವೇಳೆ ವಶಪಡಿಸಿಕೊಂಡ ನಗದಿನ ಮೊತ್ತ 36.75 ಕೋಟಿ ರು. ತಲುಪಿದೆ. ಕೆಲಸದಾಳಿನ ಮನೆಯಲ್ಲಿ 32 ಕೋಟಿ ರು. ಹಾಗೂ ಮಿಕ್ಕ 4.5 ಕೋಟಿ ರು. ಅನ್ಯ ಸ್ಥಳಗಳಲ್ಲಿ ಸಿಕ್ಕಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಗದ್ದಲದ ಮಧ್ಯೆಯೇ ‘ಜಿ ರಾಮ್‌ ಜಿ’ ವಿಧೇಯಕ ಲೋಕಸಭೇಲಿ ಮಂಡನೆ
ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಧ್ವಂಸ