ಪಾರಿವಾಳಗಳಿಂದಾಗಿ ಆರೋಗ್ಯ ಸಮಸ್ಯೆ : ಆಹಾರ ಹಾಕುವ ಮುಂಬೈನ 51 ಕೇಂದ್ರ ಬಂದ್‌ !

KannadaprabhaNewsNetwork |  
Published : Jul 06, 2025, 01:48 AM ISTUpdated : Jul 06, 2025, 04:55 AM IST
ಪಾರಿವಾಳ | Kannada Prabha

ಸಾರಾಂಶ

ಪಾರಿವಾಳಗಳಿಂದಾಗಿ ಅಲರ್ಜಿ, ಉಸಿರಾಟದ ತೊಂದರೆ, ಶ್ವಾಸಕೋಶದ ಸೋಂಕು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಕಾರಣ ನಗರದಲ್ಲಿದ್ದ 51 ಪಾರಿವಾಳ ಆಹಾರ ಕೇಂದ್ರಗಳನ್ನು ಮುಚ್ಚುವಂತೆ ಮಹಾರಾಷ್ಟ್ರ ಸರ್ಕಾರವು, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ)ಗೆ ನಿರ್ದೇಶನ ನೀಡಿದೆ.

 ಮುಂಬೈ: ಪಾರಿವಾಳಗಳಿಂದಾಗಿ ಅಲರ್ಜಿ, ಉಸಿರಾಟದ ತೊಂದರೆ, ಶ್ವಾಸಕೋಶದ ಸೋಂಕು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಕಾರಣ ನಗರದಲ್ಲಿದ್ದ 51 ಪಾರಿವಾಳ ಆಹಾರ ಕೇಂದ್ರಗಳನ್ನು ಮುಚ್ಚುವಂತೆ ಮಹಾರಾಷ್ಟ್ರ ಸರ್ಕಾರವು, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ)ಗೆ ನಿರ್ದೇಶನ ನೀಡಿದೆ.

ಈ ಆಹಾರ ಕೇಂದ್ರಗಳಿಂದ ಪಾದಚಾರಿ ಮಾರ್ಗಗಳೆಲ್ಲ ಪಾರಿವಾಳಗಳಿಂದಲೇ ತುಂಬಿಕೊಳ್ಳುತ್ತಿವೆ. ಪಾರಿವಾಳದ ಹಿಕ್ಕೆ ಹಾಗೂ ಗರಿಗಳಿಂದ ಮನುಷ್ಯನಿಗೆ ಶ್ವಾಸಕೋಶದ ಸೋಂಕು, ಹಕ್ಕಿ ಜ್ವರ, ಆಹಾರ ಸಂಬಂಧಿ ಸಮಸ್ಯೆಗಳು, ಅಲರ್ಜಿ, ಉಸಿರಾಟದ ತೊಂದರೆ ಸೇರಿ ಹಲವು ರೋಗಗಳು ಹರಡುತ್ತಿವೆ. ಕೂಡಲೇ ಪಾರಿವಾಳ ಆಹಾರ ಕೇಂದ್ರಗಳನ್ನು ಮುಚ್ಚಬೇಕು ಎಂದು ಶಿವಸೇನಾ (ಯುಬಿಟಿ) ಶಾಸಕಿ ಮನಿಷಾ ಕಾಯಂಡೆ ಮೊದಲಾದ ನಾಯಕರು ವಿನಂತಿಸಿದ್ದರು. ಈ ಹಿನ್ನೆಲೆ ಕೇಂದ್ರಗಳನ್ನು ಮುಚ್ಚುವಂತೆ ಸರ್ಕಾರ ಆದೇಶಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ
ಸುಧಾಮೂರ್ತಿ ಡೀಪ್‌ಫೇಕ್‌ ವಿಡಿಯೋ ವೈರಲ್‌ : ನಂಬಿ ಮೋಸಹೋಗದಂತೆ ವಿನಂತಿ