ಕಮಲ್‌ ನಾಥ್‌ ಬಂಡಾಯ ಶಮನ: ರಾಹುಲ್‌ ಜೊತೆ ಭಾರತ್‌ ಜೋಡೋ ಯಾತ್ರೆಗೆ ಹೋಗಲು ನಿರ್ಧಾರ

KannadaprabhaNewsNetwork |  
Published : Feb 24, 2024, 02:30 AM ISTUpdated : Feb 24, 2024, 08:44 AM IST
Kamalnath

ಸಾರಾಂಶ

ರಾಹುಲ್‌ಗಾಂಧಿ ಜೊತೆ ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಹೋಗಲು ಕಮಲ್‌ನಾಥ್‌ ನಿರ್ಧಾರ ಮಾಡಿದ್ದು, ರಾಹುಲ್‌ ನಮ್ಮ ನಾಯಕ ಎಂದು ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭೋಪಾಲ್‌: ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್‌ ಅವರ ಬಂಡಾಯ ಶಮನವಾಗಿದೆ. 

ನಾಥ್‌ ಅವರು ಮಾ.2 ರಿಂದ ಮಾ.6ರವರೆಗೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್‌ ಜೋಡೋ ನ್ಯಾಯ ಯಾತ್ರೆ’ಯಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಕಮಲ್‌, ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿಲ್ಲ ಎಂಬುದು ದೃಢವಾಗಿದೆ.

ಈ ನಡುವೆ ಟ್ವೀಟ್‌ ಮಾಡಿರುವ ಕಮಲ್‌ ‘ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಸ್ವಾಗತಿಸಲು ಮಧ್ಯಪ್ರದೇಶದ ಜನರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಉತ್ಸುಕರಾಗಿದ್ದಾರೆ. 

ನಮ್ಮ ನಾಯಕ ರಾಹುಲ್ ಗಾಂಧಿ ಅವರು ದೇಶಾದ್ಯಂತ ಅನ್ಯಾಯ, ದಬ್ಬಾಳಿಕೆ ಮತ್ತು ಶೋಷಣೆಯ ವಿರುದ್ಧ ನಿರ್ಣಾಯಕ ಹೋರಾಟ ಆರಂಭಿಸಿದ್ದಾರೆ’ ಎಂದಿದ್ದಾರೆ.

ನಾಥ್‌ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುತ್ತಿದ್ದಾರೆ, ಅವರು ಬಂಡಾಯ ಎದ್ದಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹಬ್ಬಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕೆಡಿ ಚಿತ್ರದ ‘ಸೆರಗು ಸರ್‌ಸೇ’ ಹಾಡು ಬಗ್ಗೆ ಸಂಸತ್‌ನಲ್ಲೂ ಕಿಡಿ
ರಾಜಕಾರಣಕ್ಕೆ ಪೂರ್ಣ ವಿರಾಮ ಇಲ್ಲ : ಪ್ರಧಾನಿ ನರೇಂದ್ರ ಮೋದಿ