ನವದೆಹಲಿ: ಕಳೆದ ಜೂ.17ರಂದು ಪಶ್ಚಿಮ ಬಂಗಾಳದಲ್ಲಿ ನಡೆದ ಕಾಂಚನಜುಂಗಾ ರೈಲು ಅಪಘಾತಕ್ಕೆ ಇಡೀ ರೈಲ್ವೆ ವ್ಯವಸ್ಥೆಯಲ್ಲಿನ ಹಲವು ಹಂತದಲ್ಲಿ ಲೋಪ ಸಂಭವಿಸಿದ್ದೇ ಕಾರಣ ಎಂದು ರೈಲ್ವೆ ಸುರಕ್ಷತಾ ಆಯುಕ್ತರ ವರದಿ ಬೊಟ್ಟುಮಾಡಿದೆ.
ಏನೇನು ಲೋಪ?:
ಘಟನೆ ನಡೆದ ದಿನ ಸಿಗ್ನಲ್ ದೋಷವಿದ್ದ ಕಾರಣ ಸ್ಟೇಷನ್ ಮಾಸ್ಟರ್ ಗೂಡ್ಸ್ ರೈಲಿನ ಚಾಲಕನಿಗೆ ಮುಂದೆ ಸಾಗಲು ನೀಡಿದ್ದ ಪೇಪರ್ ಅಥಾರಿಟಿ ಅನುಮತಿ ವೇಳೆ ಸೂಕ್ತ ಮಾಹಿತಿ ನೀಡಿರಲಿಲ್ಲ. ಎಷ್ಟು ವೇಗದಲ್ಲಿ ರೈಲು ಚಲಿಸಬೇಕು ಎಂದು ಸೂಚಿಸಿರಲಿಲ್ಲ. ಇದು ಸ್ಟೇಷನ್ ಮಾಸ್ಟರ್ ಕಡೆಯಿಂದ ಆದ ತಪ್ಪು.ಇನ್ನೊಂದೆಡೆ ಸಿಗ್ನಲ್ ದೋಷವಿದ್ದಾಗ ಅದೇ ಮಾರ್ಗದಲ್ಲಿ ಒಟ್ಟು 5 ರೈಲುಗಳು ಸಂಚರಿಸಿದ್ದವು. ಒಬ್ಬೊಬ್ಬರು ಒಂದೊಂದು ವೇಗದಲ್ಲಿ ಚಲಿಸಿದ್ದು ಅವರ ಕಡೆಯಿಂದಲೂ ಆದ ತಪ್ಪು. ಪ್ರತಿ ದೋಷ ಪೂರಿತ ಸಿಗ್ನಲ್ ಬಳಿ 1 ನಿಮಿಷ ರೈಲು ಸ್ಥಗಿತಬೇಕೆಂಬ ನಿಯಮವನ್ನೂ ಚಾಲಕರು ಪಾಲಿಸಿಲ್ಲ. ಏಕೆಂದರೆ ಚಾಲಕರು, ಸ್ಟೇಷನ್ ಮಾಸ್ಟರ್ಗಳಿಗೆ ಈ ಬಗ್ಗೆ ಸೂಕ್ತ ತರಬೇತಿಯೇ ಇರಲಿಲ್ಲ.