ದೇಶಕ್ಕೆ ತಂದೆ ಇರಲ್ಲ, ಮಕ್ಕಳು ಇರ್ತಾರೆ: ಗಾಂಧಿ ಬಗ್ಗೆ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಮತ್ತೊಂದು ವಿವಾದ

KannadaprabhaNewsNetwork |  
Published : Oct 03, 2024, 01:15 AM ISTUpdated : Oct 03, 2024, 05:23 AM IST
kangana-ranaut-controvertial-statement

ಸಾರಾಂಶ

ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಅವರು ಮಹಾತ್ಮ ಗಾಂಧೀಜಿ ಕುರಿತು ನೀಡಿರುವ ಪರೋಕ್ಷ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ.

ನವದೆಹಲಿ: ಇತ್ತೀಚೆಗಷ್ಟೇ ರೈತ ಕಾಯ್ದೆ ಕುರಿತ ಹೇಳಿಕೆ ನೀಡಿ ಕ್ಷಮೆ ಯಾಚಿಸಿದ್ದ ನಟಿ, ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಮತ್ತೊಂದು ವಿವಾದದಲ್ಲಿ ಸಿಕ್ಕಿಬಿದ್ದಿದ್ದಾರೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಕುರಿತು ಅವರು ನೀಡಿದ ಪರೋಕ್ಷ ಹೇಳಿಕೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಭಾನುವಾರ ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಅವರ ಜನ್ಮದಿನವಿತ್ತು. ಈ ಹಿನ್ನೆಲೆಯಲ್ಲಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟೊಂದನ್ನು ಹಾಕಿರುವ ಕಂಗನಾ, ‘ದೇಶಕ್ಕೆ ತಂದೆ (ರಾಷ್ಟ್ರಪಿತ) ಇರಲ್ಲ, ಅದರೆ ಮಕ್ಕಳು (ಲಾಲ್‌) ಇರುತ್ತಾರೆ. ಭಾರತ ಮಾತೆಯ ಈ ಮಕ್ಕಳಿಗೆ ಧನ್ಯವಾದ’ ಎಂದು ಬರೆದಿದ್ದಾರೆ.

ಅವರ ಈ ಹೇಳಿಕೆ ಗಾಂಧೀಜಿ ಅವರಿಗೆ ನೀಡಲಾಗಿರುವ ರಾಷ್ಟ್ರಪಿತ ಗೌರವವನ್ನು ಕಡೆಗಣಿಸುವ ರೀತಿಯದ್ದು ಎಂಬ ವಿಶ್ಲೇಷಣೆಗೆ ಕಾರಣವಾಗಿದೆ. ಬಿಜೆಪಿ ಸಂಸದೆ ಹೇಳಿಕೆಯನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ. ಇನ್ನೊಂದೆಡೆ ಪಂಜಾಬ್‌ನ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಕೂಡಾ ಕಂಗನಾ ಹೇಳಿಕೆ ಟೀಕಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕಾಂಡೋಮ್‌ನ ಜಿಎಸ್‌ಟಿ ಕಡಿತ ಮಾಡಲಾಗದ ದುಸ್ಥಿತಿಗೆ ಪಾಕ್‌!
ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ