ಕಂಗನಾ ಕೆನ್ನೆಗೆ ಬಾರಿಸಿದ ಪೇದೆ ಬೆಂಬಲಿಸಿ ಚಂಡೀಗಢ ರೈತ ಸಂಘಟನೆ ಮೆರವಣಿಗೆ

KannadaprabhaNewsNetwork |  
Published : Jun 10, 2024, 12:47 AM ISTUpdated : Jun 10, 2024, 05:06 AM IST
ಕಂಗನಾ | Kannada Prabha

ಸಾರಾಂಶ

ಗನಾ ರಾಣಾವತ್‌ ಮೇಲೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧ, ಹಲ್ಲೆ ನಡೆಸಿದ ಸಿಐಎಸ್‌ಎಫ್ ಮಹಿಳಾ ಪೇದೆ ಬೆಂಬಲಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಮತ್ತು ಕಿಸಾನ್‌ ಮಜದ್ದೂರ್ ಮೋರ್ಚಾ ಸೇರಿದಂತೆ ಹಲವು ರೈತಪರ ಸಂಘಟನೆಗಳು ಭಾನುವಾರ ಮೊಹಾಲಿಯಲ್ಲಿ ಬೃಹತ್ ಮೆರವಣಿಗೆ ನಡೆಸಿದರು.

ಚಂಡೀಗಢ: ನಟಿ ಮತ್ತು ಮಂಡಿ ಲೋಕಸಭಾ ಕ್ಷೇತ್ರ ಸಂಸದೆ ಕಂಗನಾ ರಾಣಾವತ್‌ ಮೇಲೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧ, ಹಲ್ಲೆ ನಡೆಸಿದ ಸಿಐಎಸ್‌ಎಫ್ ಮಹಿಳಾ ಪೇದೆ ಬೆಂಬಲಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಮತ್ತು ಕಿಸಾನ್‌ ಮಜದ್ದೂರ್ ಮೋರ್ಚಾ ಸೇರಿದಂತೆ ಹಲವು ರೈತಪರ ಸಂಘಟನೆಗಳು ಭಾನುವಾರ ಮೊಹಾಲಿಯಲ್ಲಿ ಬೃಹತ್ ಮೆರವಣಿಗೆ ನಡೆಸಿದರು. 

ಮಹಿಳಾ ಪೇದೆ ಕುಲ್ವಿಂದರ್ ಕೌರ್‌ಗೆ ಅನ್ಯಾಯವಾಗಬಾರದು, ನ್ಯಾಯಯುತ ತನಿಖೆ ನಡೆಸಬೇಕು ಎಂದು ರೈತ ಮುಖಂಡರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

ಮೊಹಾಲಿಯ ಗುರುದ್ವಾರ ಅಂಬ್ ಸಾಹಿಬ್‌ನಿಂದ ಭಾರೀ ಭದ್ರತೆಯಲ್ಲಿ ರೈತರ ಮೆರವಣಿಗೆ ಸಾಗಿತು. ಪ್ರತಿಭಟನೆ ವೇಳೆ ಕಂಗನಾ ವಿರುದ್ಧ ಕಿಡಿ ಕಾರಿದ ರೈತ ಮುಖಂಡರು,ನಟಿ ಪಂಜಾಬ್ ಜನರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮತ್ತೆ ಗದ್ದುಗೆ ಗದ್ದಲ
ಕೇಂದ್ರದಿಂದ ಭಾರತ ಮಾತೆ ಮಾರಾಟ: ರಾಗಾ ಕಿಡಿ