ವೈದ್ಯಕೀಯ ಪರೀಕ್ಷೆ ಇದೆ, 1 ವಾರ ಬೇಲ್‌ ವಿಸ್ತರಿಸಿ: ಸುಪ್ರೀಂಗೆ ಕೇಜ್ರಿ ಮನವಿ

KannadaprabhaNewsNetwork |  
Published : May 28, 2024, 01:07 AM ISTUpdated : May 28, 2024, 05:06 AM IST
Aravind Kejriwal

ಸಾರಾಂಶ

ತಮಗೆ ಆರೋಗ್ಯ ಸಂಬಂಧಿ ಪರೀಕ್ಷೆ ಮಾಡಿಸಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ಒಂದು ವಾರ ಜಾಮೀನು ಅವಧಿ ವಿಸ್ತರಿಸುವಂತೆ ನ್ಯಾಯಾಲಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮನವಿ ಮಾಡಿದ್ದಾರೆ.

ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ತಮಗೆ ನೀಡಲಾಗಿರುವ ಜಾಮೀನನ್ನು ಮತ್ತೆ ಏಳು ದಿನಗಳ ಅವಧಿಗೆ ವಿಸ್ತರಿಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ದಿಢೀರ್ ದೇಹದ ತೂಕ ನಷ್ಟವಾಗುತ್ತಿದೆ. ಹೆಚ್ಚಿನ ಕಿಟೋನ್ ಮಟ್ಟದ ಸಮಸ್ಯೆಯಿಂದ ಬಳಲುತ್ತಿದ್ದು ಪಿಇಟಿ-ಸಿಟಿ ಸ್ಕ್ಯಾನ್ ಒಳಗಾಗಲು ಜಾಮೀನು ಅವಧಿಯನ್ನು ವಾರದ ತನಕ ಮುಂದೂಡಿ ಎಂದು ನ್ಯಾಯಾಲಯಕ್ಕೆ ದೆಹಲಿ ಸಿಎಂ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಮೇ.26ರಂದು ಈ ಬಗ್ಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ಅರವಿಂದ್ ಕೇಜ್ರಿವಾಲ್ ಜೂ.9ಕ್ಕೆ ಶರಣಾಗುವುದಾಗಿ ಹೇಳಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಗದ್ದಲದ ಮಧ್ಯೆಯೇ ‘ಜಿ ರಾಮ್‌ ಜಿ’ ವಿಧೇಯಕ ಲೋಕಸಭೇಲಿ ಮಂಡನೆ
ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಧ್ವಂಸ