;Resize=(412,232))
ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ತಮಗೆ ನೀಡಲಾಗಿರುವ ಜಾಮೀನನ್ನು ಮತ್ತೆ ಏಳು ದಿನಗಳ ಅವಧಿಗೆ ವಿಸ್ತರಿಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ದಿಢೀರ್ ದೇಹದ ತೂಕ ನಷ್ಟವಾಗುತ್ತಿದೆ. ಹೆಚ್ಚಿನ ಕಿಟೋನ್ ಮಟ್ಟದ ಸಮಸ್ಯೆಯಿಂದ ಬಳಲುತ್ತಿದ್ದು ಪಿಇಟಿ-ಸಿಟಿ ಸ್ಕ್ಯಾನ್ ಒಳಗಾಗಲು ಜಾಮೀನು ಅವಧಿಯನ್ನು ವಾರದ ತನಕ ಮುಂದೂಡಿ ಎಂದು ನ್ಯಾಯಾಲಯಕ್ಕೆ ದೆಹಲಿ ಸಿಎಂ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಮೇ.26ರಂದು ಈ ಬಗ್ಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ಅರವಿಂದ್ ಕೇಜ್ರಿವಾಲ್ ಜೂ.9ಕ್ಕೆ ಶರಣಾಗುವುದಾಗಿ ಹೇಳಿದ್ದಾರೆ.