ನವದೆಹಲಿ: ದೆಹಲಿಯ ಅಬಕಾರಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರದಂದು ದೆಹಲಿಯಲ್ಲಿ ಬಿಆರ್ಎಸ್ ನಾಯಕಿ ಹಾಗೂ ತೆಲಂಗಾಣ ಮಾಜಿ ಸಿಎಂ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಕರೆಯಲಾಗಿದ್ದ ವಿಚಾರಣೆಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಿರುವ ಕಾರಣ ಬರಲಾಗುವುದಿಲ್ಲ ಎಂಬುದಾಗಿ ಸಿಬಿಐಗೆ ಪತ್ರದ ಮೂಲಕ ತಿಳಿಸಿದ್ದಾರೆ. ‘ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯವನ್ನು ಬಿಟ್ಟು ಬರುವ ಸ್ಥಿತಿಯಲ್ಲಿಲ್ಲ. ಅಲ್ಲದೆ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿರುವ ಕಾರಣ ಈ ವಿಚಾರಣೆಗೆ ಗೈರು ಹಾಜರಾಗುತ್ತಿದ್ದು, ವಿಚಾರಣೆಯ ನೋಟಿಸನ್ನು ಅಮಾನತು ಮಾಡಬೇಕೆಂದು ಕೋರುತ್ತೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.