ಕೋಲ್ಕತಾ ವೈದ್ಯೆ ಹತ್ಯೆ ಹಿಂದೆ ಔಷಧ ದಂಧೆ ಕೈ? ಮಾಫಿಯಾದ ಕೈವಾಡವಿರಬಹುದು ಎಂಬ ಗಂಭೀರ ಆರೋಪ

KannadaprabhaNewsNetwork |  
Published : Aug 19, 2024, 01:54 AM ISTUpdated : Aug 19, 2024, 04:41 AM IST
ಪ್ರತಿಭಟನೆ | Kannada Prabha

ಸಾರಾಂಶ

ಇಲ್ಲಿನ ಪ್ರತಿಷ್ಠಿತ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಮಹಿಳಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಮೇಲ್ನೋಟಕ್ಕೆ ಕಾಣುವಷ್ಟು ಸರಳವಾಗಿಲ್ಲ. ಅದರ ಹಿಂದೆ ಔಷಧ ಕಳವಿನ ಮಾಫಿಯಾದ ಕೈವಾಡವಿರಬಹುದು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಕೋಲ್ಕತಾ: ಇಲ್ಲಿನ ಪ್ರತಿಷ್ಠಿತ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಮಹಿಳಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಮೇಲ್ನೋಟಕ್ಕೆ ಕಾಣುವಷ್ಟು ಸರಳವಾಗಿಲ್ಲ. ಅದರ ಹಿಂದೆ ಔಷಧ ಕಳವಿನ ಮಾಫಿಯಾದ ಕೈವಾಡವಿರಬಹುದು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಒಂದು ವೇಳೆ ಇದು ನಿಜವಾದರೆ ಇಡೀ ಪ್ರಕರಣಕ್ಕೆ ಹೊಸ ತಿರುವು ಸಿಗಲಿದೆ.

ಹತ್ಯೆಗೊಳಗಾದ ವೈದ್ಯೆಯು ತನ್ನ ಡೈರಿಯಲ್ಲಿ ದಾಖಲಿಸಿರುವ ಕೆಲ ಅಂಶಗಳು, ವೈದ್ಯೆಯ ಸಹೋದ್ಯೋಗಿಗಳು ಮತ್ತು ಪೋಷಕರು ನೀಡಿರುವ ಹೇಳಿಕೆಗಳು ಇಂಥದ್ದೊಂದು ದಿಕ್ಕಿನತ್ತ ಪ್ರಕರಣವನ್ನು ತಿರುಗಿಸುವ ಸುಳಿವು ನೀಡಿದೆ. ಇದು ಸರಳವಾದ ಅಪರಾಧ ಪ್ರಕರಣವಲ್ಲ. ಉದ್ದೇಶಪೂರ್ವಕ ಕೃತ್ಯದಂತಿದೆ ಎಂದು ಇವರೆಲ್ಲರೂ ಶಂಕಿಸಿದ್ದಾರೆ.

‘ಆಕೆ 48 ಗಂಟೆಗಳ ನಿರಂತರ ಪಾಳಿ ಸೇರಿದಂತೆ ಭಾರೀ ಕೆಲಸದ ಒತ್ತಡದಲ್ಲಿದ್ದಳು. ಜೊತೆಗೆ ಘಟನೆ ನಡೆದ ದಿನ ಸಂತ್ರಸ್ತೆ ಸೆಮಿನಾರ್ ಹಾಲ್‌ನಲ್ಲಿ ಒಬ್ಬಳೇ ಇರುವುದು ಬಂಧಿತ ಆರೋಪಿ ಸಂಜಯ್ ರಾಯ್‌ಗೆ ಹೇಗೆ ಗೊತ್ತಾಯಿತು. ರಾಯ್‌ ಒಂದು ದೊಡ್ಡ ಜಾಲದಲ್ಲಿನ ಭಾಗವಾಗಿರಬಹುದು ಅಷ್ಟೆ’ ಎಂದು ಒಬ್ಬ ಸಹೋದ್ಯೋಗಿ ಸಂದೇಹಿಸಿದ್ದಾರೆ.

ಇನ್ನೊಬ್ಬ ಸಹೋದ್ಯೋಗಿ ಮಾತನಾಡಿ, ‘ಸಂತ್ರಸ್ತೆಯು ತನ್ನ ಇಲಾಖೆಯಲ್ಲಿ ಸಂಭವನೀಯ ಡ್ರಗ್ಸ್‌ ಜಾಲ ಬಹಿರಂಗಪಡಿಸಲು ಪ್ರಯತ್ನಿಸುತ್ತಿದ್ದಳು. ಆಕೆಗೆ ತುಂಬಾ ತಿಳಿದಿರಬಹುದು. ಹೀಗಾಗಿ ಆಕೆಯನ್ನು ಕೊಂದಿರಬಹುದು’ ಎಂದಿದ್ದಾರೆ.

31ರ ಹರೆಯದ ವೈದ್ಯರ ತಾಯಿ ಮಾತನಾಡಿ, ದಾಳಿಗೆ ಕೆಲವು ದಿನ ಮುನ್ನ ನನ್ನ ಮಗಳು ಆಸ್ಪತ್ರೆಗೆ ಹೋಗುವ ಬಗ್ಗೆ ಇಷ್ಟವಿರಲಿಲ್ಲ ಎಂದಿದ್ದಳು ಎಂದರೆ, ಸಂತ್ರಸ್ತೆಯ ತಂದೆ ತನ್ನ ಮಗಳನ್ನು ಸೆಮಿನಾರ್ ಹಾಲ್‌ನಲ್ಲಿ ಕೊಲ್ಲಲಾಗಿದೆಯೇ ಎಂಬುದೇ ಸಂದೇಹಾಸ್ಪದ. ಅವಳು ಬೇರೆಡೆ ಕೊಲ್ಲಲ್ಪಟ್ಟಿರಬಹುದು ಎಂದು ಶಂಕಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಾಗಾ ವಿರುದ್ಧ ಸಂಸತ್ತಲ್ಲಿ ಬಿಜೆಪಿಯ ಅನರ್ಹತೆ ಅಸ್ತ್ರ
7 ದಶಕಗಳ ಬಳಿಕಹೊಸ ಕಟ್ಟಡಕ್ಕೆ ಪ್ರಧಾನಿ ಕಚೇರಿ - ಇಂದು ‘ಸೇವಾ ತೀರ್ಥ’ ಉದ್ಘಾಟನೆ