ರಾಜ್ಯಸಭಾ ಅಭ್ಯರ್ಥಿಗಳ ಸರಾಸರಿ ಆಸ್ತಿ ₹127 ಕೋಟಿ: ಎಡಿಆರ್‌ ವರದಿ

KannadaprabhaNewsNetwork |  
Published : Feb 25, 2024, 01:45 AM IST
ಕುಪೇಂದ್ರ | Kannada Prabha

ಸಾರಾಂಶ

ಶೇ.36 ರಾಜ್ಯಸಭಾ ಅಭ್ಯರ್ಥಿಗಳಿಗೆ ಕ್ರಿಮಿನಲ್‌ ಹಿನ್ನೆಲೆಯಿದೆ ಎಂದು ವರದಿ ಮಾಡಿದೆ. ಸಿಂಘ್ವಿ, ಜಯಾ ಬಚ್ಚನ್‌, ಕುಪೇಂದ್ರ ರೆಡ್ಡಿ ಟಾಪ್‌ 3 ಸಿರಿವಂತ ರಾಜ್ಯಸಭಾ ಅಭ್ಯರ್ಥಿಗಳಾಗಿದ್ದಾರೆ.

ನವದೆಹಲಿ: ರಾಜ್ಯಸಭೆಯ 56 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಸ್ಪರ್ಧಿಸಿರುವವರ ಪೈಕಿ ಶೇ.36ರಷ್ಟು ಜನರು ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದಾರೆ. ಇವರ ಸರಾಸರಿ ಆಸ್ತಿ 127 ಕೋಟಿ ರು.ನಷ್ಟಿದೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಪ್ರಜಾಸತ್ತಾತ್ಮಕ ಸುಧಾರಣೆಗಳ ಸಂಘ (ಎಡಿಆರ್‌) ವರದಿ ಹೇಳಿದೆ.

ಕರ್ನಾಟಕ ಸೇರಿ 15 ರಾಜ್ಯಗಳ 56 ಸ್ಥಾನಗಳಿಗೆ 59 ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾ3ರೆ. ಈ ಪೈಕಿ ಕರ್ನಾಟಕದ ಜಿ.ಸಿ.ಚಂದ್ರಶೇಖರ್‌ ಹೊರತುಪಡಿಸಿ ಉಳಿದ ಅಭ್ಯರ್ಥಿಗಳು ಸಲ್ಲಿಸಿದ ಅಫಿಡವಿಟ್‌ ಆಧರಿಸಿ ಈ ವರದಿ ತಯಾರಿಸಲಾಗಿದೆ.

ಇದರನ್ವಯ ಶೇ.36ರಷ್ಟು ಅಭ್ಯರ್ಥಿಗಳು ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದಾರೆ. ಈ ಪೈಕಿ ಶೆ.17ರಷ್ಟು ಜನರು ಗಂಭೀರ ಪ್ರಕರಣ ಎದುರಿಸುತ್ತಿದ್ದಾರೆ. ಒಬ್ಬರ ವಿರುದ್ಧ ಕೊಲೆ ಯತ್ನದ ಆರೋಪವಿದೆ.8 ಮಂದಿ ಬಿಜೆಪಿ, 6 ಕಾಂಗ್ರೆಸ್‌, ಒಂದು ಟಿಎಂಸಿ, ಎರಡು ಎಸ್‌ಪಿ, ಒಂದು ವೈಎಸ್‌ಆರ್‌ಸಿಪಿ, ಒಂದು ಆರ್‌ಜೆಡಿ, ಒಂದು ಬಿಜೆಡಿ ಮತ್ತು ಒಂದು ಬಿಆರ್‌ಎಸ್‌ ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣಗಳಿವೆ. ಶೇ.21 ರಷ್ಟು ಅಭ್ಯರ್ಥಿಗಳು ಶತಕೋಟಿ ಒಡೆಯರು. ಇವರ ಆಸ್ತಿ ಮೌಲ್ಯ 100 ಕೋಟಿ ರು. ದಾಟಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಅಭಿಷೇಕ್‌ ಮನು ಸಿಂಘ್ವಿ 1,872 ಕೋಟಿ ರು., ಸಮಾಜವಾದಿ ಪಕ್ಷದ ಜಯಾ ಅಮಿತಾಭ್‌ ಬಚ್ಚನ್‌ 1,578 ಕೋಟಿ ರು., ಕರ್ನಾಟಕದಿಂದ ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಸುಮಾರು 871 ಕೋಟಿ ರು. ಹೊಂದಿದ್ದಾರೆ. ಇವರು ಸ್ಪರ್ಧಿಸಿರುವವರ ಪೈಕಿ ಮೂವರು ಸಿರಿವಂತ ಅಭ್ಯರ್ಥಿಗಳು ಎಂದು ವರದಿ ತಿಳಿಸಿದೆ. ಅಭ್ಯರ್ಥಿಗಳಲ್ಲಿ ಶೇ.17ರಷ್ಟು ಮಂದಿ 5ನೇ ತರಗತಿಯಿಂದ 12ನೇ ತರಗತಿ ವರೆಗೆ ಶಿಕ್ಷಣ ಪಡೆದಿದ್ದಾರೆ. ಶೇ.79 ರಷ್ಟು ಮಂದಿ ಪದವಿ ಮತ್ತು ಉನ್ನತ ಪದವಿ ಪಡೆದಿದ್ದಾರೆ ಎಂದು ವರದಿ ಹೇಳಿದೆ.

56 ಸ್ಥಾನಗಳ ಪೈಕಿ 41 ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 15 ಸ್ಥಾನಗಳಿಗೆ ಫೆ.27ರಂದು ಚುನಾವಣೆ ನಡೆಯಲಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ಭಾರೀ ಮಳೆ ಎಚ್ಚರಿಕೆ
ಜಿ ರಾಮ್‌ ಜಿ ವಿರುದ್ಧ ಕೈ ಹೋರಾಟ ಶುರು