ಸ್ವಾಮಿ ಜಗನ್ನಾಥನೇ ಮೋದಿಯ ಭಕ್ತ: ಸಂಬಿತ್‌ ಪಾತ್ರ ವಿವಾದ

KannadaprabhaNewsNetwork |  
Published : May 21, 2024, 12:36 AM ISTUpdated : May 21, 2024, 05:29 AM IST
ಸಂಬಿತ್‌ ಪಾತ್ರ | Kannada Prabha

ಸಾರಾಂಶ

‘ಪುರಿ ಜಗನ್ನಾಥ ಸ್ವಾಮಿಯೇ ಪ್ರಧಾನಿ ಮೋದಿಯ ಭಕ್ತ’ ಎನ್ನುವ ಮೂಲಕ ಪುರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಬಿಜೆಪಿ ನಾಯಕ ಸಂಬಿತ್‌ ಪಾತ್ರ ವಿವಾದ ಸೃಷ್ಟಿಸಿದ್ದಾರೆ.

ಭುವನೇಶ್ವರ: ‘ಪುರಿ ಜಗನ್ನಾಥ ಸ್ವಾಮಿಯೇ ಪ್ರಧಾನಿ ಮೋದಿಯ ಭಕ್ತ’ ಎನ್ನುವ ಮೂಲಕ ಪುರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಬಿಜೆಪಿ ನಾಯಕ ಸಂಬಿತ್‌ ಪಾತ್ರ ವಿವಾದ ಸೃಷ್ಟಿಸಿದ್ದಾರೆ.

ಮತದಾನದ ಬಳಿಕ ಪತ್ರಕರ್ತರೊಂದಿಗೆ ಮಾತನಾಡುತ್ತಾ, ‘ಮಹಾಪ್ರಭು ಜಗನ್ನಾಥ ಮೋದಿಯ ಭಕ್ತ’ ಎಂದು ಹೇಳಿದರು. ಈ ಕುರಿತು ಕಾಂಗ್ರೆಸ್‌ ಹಾಗೂ ಬಿಜೆಡಿ ತೀವ್ರ ವಾಗ್ದಾಳಿ ನಡೆಸಿವೆ.

 ‘ಸಂಬಿತ್‌ ಪಾತ್ರ ಒಡಿಶಾ ಅಸ್ಮಿತೆಗೆ ಧಕ್ಕೆ ತಂದಿದ್ದು, ರಾಷ್ಟ್ರೀಯ ಮಾಧ್ಯಮದಲ್ಲಿ ಕೈ ಮುಗಿದು ಕ್ಷಮೆಯಾಚಿಸಬೇಕು’ ಎಂದು ಕಾಂಗ್ರೆಸ್‌ ಆಗ್ರಹಿಸಿದ್ದರೆ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ‘ಒಡಿಯಾ ಜನರ ಭಾವನೆಗೆ ಈ ಹೇಳಿಕೆಯಿಂದ ಧಕ್ಕೆ ಆಗಿದೆ’ ಎಂದಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಗೌರಿ ಲಂಕೇಶ್‌ ಹತ್ಯೆ ಆರೋಪಿ ಮಹಾರಾಷ್ಟ್ರ ಪಾಲಿಕೆ ಚುನಾವಣೆಗೆ
ನಮ್ಮ ಯುದ್ಧ ವಿಮಾನಕ್ಕೆ ಭಾರೀ ಡಿಮ್ಯಾಂಡ್‌, ಸಾಲ ಬೇಡ : ಪಾಕ್‌