ಪಶ್ಚಿಮ ಬಂಗಾಳ ಡಿಜಿಪಿ, 6 ಗೃಹ ಕಾರ್ಯದರ್ಶಿಗಳ ಎತ್ತಂಗಡಿ

KannadaprabhaNewsNetwork |  
Published : Mar 19, 2024, 12:46 AM IST
ರಾಜೀವ್‌ ಕುಮಾರ್‌ | Kannada Prabha

ಸಾರಾಂಶ

ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಹಿಂಸಾಪೀಡಿತ ಪ.ಬಂಗಾಳದ ಡಿಜಿಪಿ ಹಾಗೂ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಚುನಾವಣಾ ಆಯೋಗ ಎತ್ತಂಗಡಿ ಮಾಡಿದೆ.

ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಹಿಂಸಾಪೀಡಿತ ಪ.ಬಂಗಾಳದ ಡಿಜಿಪಿ ಹಾಗೂ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಚುನಾವಣಾ ಆಯೋಗ ಎತ್ತಂಗಡಿ ಮಾಡಿದೆ.

ಸಂದೇಶ್‌ಖಾಲಿ ಹಿಂಸೆಯಿಂದ ಸುದ್ದಿಯಲ್ಲಿರುವ ಪ.ಬಂಗಾಳದ ಡಿಜಿಪಿ ರಾಜೀವ್‌ ಕುಮಾರ್‌ ಅವರನ್ನು ವರ್ಗಾಯಿಸಿರುವ ಆಯೋಗ, ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ವಿವೇಕ್‌ ಸಹಾಯ್‌ರನ್ನು ನೇಮಿಸಿದೆ. ಅಲ್ಲದೆ, ಗುಜರಾತ್‌, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಗೃಹ ಕಾರ್ಯದರ್ಶಿಗಳನ್ನೂ ಸಹ ವರ್ಗಾಯಿಸಿದೆ.

ಇದಲ್ಲದೆ, ಬೃಹನ್ಮುಂಬಯಿ ಪಾಲಿಕೆ ಆಯುಕ್ತರು, ಸಹಾಯಕ ಆಯುಕ್ತರು ಮತ್ತು ಉಪ ಆಯುಕ್ತರು ಸೋಮವಾರ ಸಂಜೆ 6 ಗಂಟೆ ಒಳಗೆ ಹುದ್ದೆ ಬಿಡಬೇಕು ಎಂದು ಸೂಚಿಸಿದೆ.

ಏಕೆ ತೆರವು?:

ನೀತಿ ಸಂಹಿತೆ ಜಾರಿಯಾದ ಬಳಿಕ ಚುನಾವಣಾ ಆಯೋಗಕ್ಕೆ ಅಧಿಕಾರಿಗಳನ್ನು ವರ್ಗಾಯಿಸುವ ಪರಮೋಚ್ಚ ಅಧಿಕಾರವಿರುತ್ತದೆ. ಈ ವೇಳೆ, ಆಯೋಗವು ಆಯಾ ರಾಜ್ಯ ಸರ್ಕಾರಗಳಿಗೆ ಹೆಚ್ಚು ನಿಷ್ಠೆ ಹೊಂದಿರುವ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ನಿಷ್ಪಕ್ಷಪಾತ ಅಧಿಕಾರಿಗಳನ್ನು ನೇಮಿಸುವುದು ಮಾಮೂಲಿ ಕ್ರಮ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಶ್ಮಿಕಾ-ವಿಜಯ್‌ ಮದುವೆ ಪ್ರಸಾರಕ್ಕೆ ₹60 ಕೋಟಿ ಆಫರ್‌!
ಬ್ರಹ್ಮಪುತ್ರಾ ನದಿ ಮೇಲೆ ಅತ್ಯಾಧುನಿಕ 6 ಪಥದ ಸೇತುವೆ