ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಹಿಂಸಾಪೀಡಿತ ಪ.ಬಂಗಾಳದ ಡಿಜಿಪಿ ಹಾಗೂ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಚುನಾವಣಾ ಆಯೋಗ ಎತ್ತಂಗಡಿ ಮಾಡಿದೆ.
ಇದಲ್ಲದೆ, ಬೃಹನ್ಮುಂಬಯಿ ಪಾಲಿಕೆ ಆಯುಕ್ತರು, ಸಹಾಯಕ ಆಯುಕ್ತರು ಮತ್ತು ಉಪ ಆಯುಕ್ತರು ಸೋಮವಾರ ಸಂಜೆ 6 ಗಂಟೆ ಒಳಗೆ ಹುದ್ದೆ ಬಿಡಬೇಕು ಎಂದು ಸೂಚಿಸಿದೆ.
ಏಕೆ ತೆರವು?:ನೀತಿ ಸಂಹಿತೆ ಜಾರಿಯಾದ ಬಳಿಕ ಚುನಾವಣಾ ಆಯೋಗಕ್ಕೆ ಅಧಿಕಾರಿಗಳನ್ನು ವರ್ಗಾಯಿಸುವ ಪರಮೋಚ್ಚ ಅಧಿಕಾರವಿರುತ್ತದೆ. ಈ ವೇಳೆ, ಆಯೋಗವು ಆಯಾ ರಾಜ್ಯ ಸರ್ಕಾರಗಳಿಗೆ ಹೆಚ್ಚು ನಿಷ್ಠೆ ಹೊಂದಿರುವ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ ನಿಷ್ಪಕ್ಷಪಾತ ಅಧಿಕಾರಿಗಳನ್ನು ನೇಮಿಸುವುದು ಮಾಮೂಲಿ ಕ್ರಮ.