ದೆಹಲಿ ಆಮ್‌ ಆದ್ಮಿ ಪಕ್ಷ ಜಾರಿಗೊಳಿಸಲುದ್ದೇಶಿಸಿರುವ ಗೃಹಲಕ್ಷ್ಮೀ ಸ್ಕೀಂ ಬಗ್ಗೆ ತನಿಖೆಗೆ ಗವರ್ನರ್‌ ಆದೇಶ

KannadaprabhaNewsNetwork |  
Published : Dec 29, 2024, 01:19 AM ISTUpdated : Dec 29, 2024, 04:31 AM IST
ಮಹಿಳಾ ಸಮ್ಮಾನ್ | Kannada Prabha

ಸಾರಾಂಶ

 ಕರ್ನಾಟಕದ ಗೃಹಲಕ್ಷ್ಮಿ ಮಾದರಿಯಲ್ಲೇ ದೆಹಲಿಯ ಆಮ್‌ ಆದ್ಮಿ ಪಕ್ಷ(ಆಪ್‌) ಜಾರಿಗೊಳಿಸಲುದ್ದೇಶಿಸಿರುವ ಮಹಿಳಾ ಸಮ್ಮಾನ್‌ ಯೋಜನೆ ಕುರಿತು ತನಿಖೆಗೆ ದೆಹಲಿಯ ಗವರ್ನರ್‌   ಆದೇಶಿಸಿದ್ದಾರೆ.

ನವದೆಹಲಿ: ಕರ್ನಾಟಕದ ಗೃಹಲಕ್ಷ್ಮಿ ಮಾದರಿಯಲ್ಲೇ ದೆಹಲಿಯ ಆಮ್‌ ಆದ್ಮಿ ಪಕ್ಷ(ಆಪ್‌) ಜಾರಿಗೊಳಿಸಲುದ್ದೇಶಿಸಿರುವ ಮಹಿಳಾ ಸಮ್ಮಾನ್‌ ಯೋಜನೆ ಕುರಿತು ತನಿಖೆಗೆ ದೆಹಲಿಯ ಗವರ್ನರ್‌ ಆದೇಶಿಸಿದ್ದಾರೆ.

ದೆಹಲಿ ಕಾಂಗ್ರೆಸ್‌ ನಾಯಕ ಸಂದೀಪ್‌ ದೀಕ್ಷಿತ್‌ ದೂರಿನ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಈ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರಿ ಯೋಜನೆ ಫಲಾನುಭವಿಗಳ ನೋಂದಣಿ ಹೆಸರಲ್ಲಿ ಖಾಸಗಿ ವ್ಯಕ್ತಿಗಳು ನಾಗರಿಕರ ಖಾಸಗಿ ಮಾಹಿತಿ ಸಂಗ್ರಹಿಸುತ್ತಿದ್ದಾರೆಯೇ ಎಂದು ಪರಿಶೀಲಿಸಬೇಕು ಮತ್ತು ಸಾರ್ವಜನಿಕರ ಖಾಸಗಿತನದ ಉಲ್ಲಂಘನೆಯಾಗುತ್ತಿದ್ದರೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.ಕೇಜ್ರಿ ಖಂಡನೆ:

ತನಿಖೆಯ ಕ್ರಮವನ್ನು ಆಪ್‌ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ತೀವ್ರವಾಗಿ ಖಂಡಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಮತ್ತು ಕಾಂಗ್ರೆಸ್‌ ಯೋಜನೆ ಮತ್ತು ಜನರ ದಾರಿತಪ್ಪಿಸಲು ಹೊರಟಿದೆ ಎಂದು ಆರೋಪಿಸಿದ್ದಾರೆ. ಆದರೆ ಬಿಜೆಪಿ ಮಾತ್ರ ಲೆಫ್ಟಿನೆಂಟ್‌ ಗವರ್ನರ್‌ ನಡೆಯನ್ನು ಸ್ವಾಗತಿಸಿದೆ.

ಏನಿದು ಗೃಹಲಕ್ಷ್ಮೀ ಯೋಜನೆ?:

ಮಹಿಳಾ ಸಮ್ಮಾನ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಯುವತಿಯರು, ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರು. ನೀಡುವುದಾಗಿ ಆಮ್‌ ಆದ್ಮಿ ಸರ್ಕಾರ ಘೋಷಿಸಿದೆ. ಒಂದು ವೇಳೆ ಆಪ್‌ ಸರ್ಕಾರ ಫೆಬ್ರವರಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಈ ಮೊತ್ತವನ್ನು 2,100ಕ್ಕೆ ಏರಿಸುವುದಾಗಿ ತಿಳಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಷ್ಯಾದ ಯಾಕುಟಿಯಾದಲ್ಲಿ- 56 ಡಿ.ಸೆ. ತಾಪ ದಾಖಲು
ಹಾರುವ ಮೊದಲೇ ಕೇರಳದ ವಿಮಾನ ಸಂಸ್ಥೆ ಸಂಕಷ್ಟದಲ್ಲಿ