ಮಧ್ಯಪ್ರದೇಶದಲ್ಲಿ ಲವ್‌ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್‌ಐಟಿ

KannadaprabhaNewsNetwork |  
Published : May 06, 2025, 01:48 AM ISTUpdated : May 06, 2025, 05:08 AM IST
ಲವ್‌ ಜಿಹಾದ್‌ | Kannada Prabha

ಸಾರಾಂಶ

  ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಬಲವಂತದ ಮತಾಂತರದ ಆರೋಪಗಳನ್ನು ತನಿಖೆ ಮಾಡುವ ಉದ್ದೇಶದಿಂದ ವಿಶೇಷ ತನಿಖಾ ತಂಡವನ್ನು ರಚಿಸುವ ಘೋಷಣೆ ಮಾಡಿದೆ.

ಭೋಪಾಲ್: ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಕೂಗು ಕೇಳಿಬರುತ್ತಿರುವ ನಡುವೆಯೇ, ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಬಲವಂತದ ಮತಾಂತರದ ಆರೋಪಗಳನ್ನು ತನಿಖೆ ಮಾಡುವ ಉದ್ದೇಶದಿಂದ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವ ಘೋಷಣೆ ಮಾಡಿದೆ.

ಇತ್ತೀಚೆಗೆ ಪುರುಷರ ಗುಂಪೊಂದು ತನ್ನ ಧಾರ್ಮಿಕ ಗುರುತನ್ನು ಮರೆಮಾಚಿ ಮಹಿಳೆಗೆ ಬ್ಲ್ಯಾಕ್‌ಮೇಲ್ ಮಾಡಿ, ಅತ್ಯಾಚಾರವೆಸಗಿದ ಘಟನೆ ಭೋಪಾಲ್‌ನಲ್ಲಿ ನಡೆದಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮಧ್ಯಪ್ರದೇಶ ಪೊಲೀಸ್‌ ಮುಖ್ಯಾಲಯ ಎಸ್‌ಐಟಿ ರಚನೆಯ ಆದೇಶ ಹೊರಡಿಸಿದೆ.

‘ಮದುವೆಯ ಉದ್ದೇಶದ ಬಲವಂತದ ಮತಾಂತರ ಅಪರಾಧ. ಬೆದರಿಕೆ, ಬ್ಲ್ಯಾಕ್‌ಮೇಲ್‌ ಮೂಲಕ ಮತಾಂತರ ಮಾಡಿ ಮದುವೆ ಆಗುವುದು ಹಾಗೂ ಧಾರ್ಮಿಕ ಗುರುತು ಮರೆಮಾಚಿ ಮದುವೆ ಆಗುವುದೂ ಅಪರಾಧ. ಇಂಥ ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಎಸ್‌ಐಟಿ ಹೊಂದಿದೆ’ ಎಂದು ಅದು ಹೇಳಿದೆ.

ಈಗಾಗಲೇ ಉತ್ತರ ಪ್ರದೇಶ ಹಾಗೂ ಗುಜರಾತ್‌ನಲ್ಲಿ ‘ಲವ್‌ ಜಿಹಾದ್‌’ ವಿರುದ್ಧ ಕಾನೂನಿದೆ. ಮಧ್ಯಪ್ರದೇಶದಲ್ಲಿ ಬಲವಂತದ ಮತಾಂತರ ತಡೆ ಕಾನೂನು ಇದೆ. ಮಹಾರಾಷ್ಟ್ರದಲ್ಲೂ ಲವ್‌ ಜಿಹಾದ್‌ ವಿರುದ್ಧ ಕಾಯ್ದೆಗೆ ಕೂಗು ಕೇಳಿಬಂದಿತ್ತು. ಹೀಗಾಗಿ ಅಧ್ಯಯನಕ್ಕೆ ಸರ್ಕಾರ ಸಮಿತಿ ರಚಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ