23 ಸೀಟಿಗೆ ಉದ್ಧವ್‌ ಪಟ್ಟು: ಮಹಾರಾಷ್ಟ್ರದಲ್ಲೂ ಕೈಗೆ ಸಂಕಷ್ಟ

KannadaprabhaNewsNetwork |  
Published : Jan 26, 2024, 01:45 AM IST
ಉದ್ಧವ್‌ | Kannada Prabha

ಸಾರಾಂಶ

25 ಸೀಟುಗಳ ಹಂಚಿಕೆಗೆ ಎನ್‌ಸಿಪಿ- ಕಾಂಗ್ರೆಸ್‌ ನಡುವೆ ಸೆಣಸು ನಡೆಸಲಿ. ಮಿಕ್ಕ 23 ಸೀಟುಗಳನ್ನು ಉದ್ಧವ್‌ ಬಣ ತಮಗೆ ಬಿಟ್ಟುಕೊಡಿ ಎಂದು ಬಿಗಿಪಟ್ಟು ಹಿಡಿದಿದ್ದು, ಮೈತ್ರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ನಾಸಿಕ್: ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆ ಬಿಕ್ಕಟ್ಟು ಪಶ್ಚಿಮ ಬಂಗಾಳ, ಪಂಜಾಬ್‌, ಬಿಹಾರದ ಬಳಿಕ ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಪಾಲಿಗೆ ಸಂಕಷ್ಟ ತಂದಿಡುವ ಎಲ್ಲಾ ಸಾಧ್ಯತೆಗಳು ಕಂಡುಬಂದಿವೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ 48ರ ಪೈಕಿ ತಾನು ಸ್ಪರ್ಧಿಸಿದ್ದ 23 ಸ್ಥಾನಗಳಲ್ಲಿ ಈ ಬಾರಿಯೂ ತಾನು ಸ್ಪರ್ಧಿಸಿಯೇ ತೀರುವುದಾಗಿ ಉದ್ಧವ್‌ ಬಣದ ಶಿವಸೇನೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ಈ ಮೂಲಕ ಕಾಂಗ್ರೆಸ್‌ ಬೇಕಿದ್ದರೆ, ಎನ್‌ಸಿಪಿ ಜೊತೆ ಸೀಟು ಹಂಚಿಕೆ ಮಾತುಕತೆ ನಡೆಸಲಿ ಎಂದು ಪರೋಕ್ಷವಾಗಿ ಸೂಚಿಸಿದೆ.

ಕಳೆದ ಬಾರಿ ಕಾಂಗ್ರೆಸ್‌ 26 ಮತ್ತು ಎನ್‌ಸಿಪಿ 22 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದವು.

ಆದರೆ ಈ ಬಾರಿ 48ರ ಪೈಕಿ 23 ತನಗೆ ಬೇಕೆಂದು ಉದ್ಧವ್‌ ಬಣ ಪಟ್ಟು ಹಿಡಿದಿದೆ. ಹೀಗಾಗಿ ಉಳಿದ 25 ಸೀಟುಗಳನ್ನು ಕಾಂಗ್ರೆಸ್‌ ಮತ್ತು ಎನ್‌ಸಿಪಿ ಹಂಚಿಕೊಳ್ಳಬೇಕಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಐಎಎಸ್‌, ಐಎಫ್ಎಸ್‌ಗಳಿಗೆ ಯುಪಿಎಸ್ಸಿ 2ನೇ ಚಾನ್ಸ್‌ ಇಲ್ಲ- ಯುಪಿಎಸ್ಸಿ ನಿಯಮ ಬದಲು
ಶ್ರೀಶೈಲ ದೇಗುಲ ಪ್ರಸಾದಕ್ಕೂ ತಿರುಪತಿ ರೀತಿ ಕಲಬೆರಕೆ ತುಪ್ಪ!