ಮಹಾರಾಷ್ಟ್ರ ಸರ್ಕಾರ ರಚಿಸಿರುವ ಮಹಾಯುತಿ ಕೂಟದ ಮಂತ್ರಿಮಂಡಲ ವಿಸ್ತರಣೆ : 39 ಸಚಿವರ ಪ್ರಮಾಣ

KannadaprabhaNewsNetwork |  
Published : Dec 16, 2024, 12:45 AM ISTUpdated : Dec 16, 2024, 05:55 AM IST
ಮಹಾ ಮಂತ್ರಿಮಂಡಲ | Kannada Prabha

ಸಾರಾಂಶ

ಇತ್ತೀಚೆಗೆ ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿರುವ ಮಹಾಯುತಿ ಕೂಟದ (ಬಿಜೆಪಿ, ಶಿಂಧೆ ಅವರ ಶಿವಸೇನೆ, ಅಜಿತ್‌ರ ಎನ್‌ಸಿಪಿ) ಮಂತ್ರಿಮಂಡಲ10 ದಿನ ಬಳಿಕ ವಿಸ್ತರಣೆ ಆಗಿದೆ ಹಾಗೂ 39 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ನಾಗ್ಪುರ: ಇತ್ತೀಚೆಗೆ ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿರುವ ಮಹಾಯುತಿ ಕೂಟದ (ಬಿಜೆಪಿ, ಶಿಂಧೆ ಅವರ ಶಿವಸೇನೆ, ಅಜಿತ್‌ರ ಎನ್‌ಸಿಪಿ) ಮಂತ್ರಿಮಂಡಲ10 ದಿನ ಬಳಿಕ ವಿಸ್ತರಣೆ ಆಗಿದೆ ಹಾಗೂ 39 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಹಿಂದೊಮ್ಮೆ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಬಿಜೆಪಿಯ ಪಂಕಜಾ ಮುಂಡೆ, ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಾನ್ಕುಳೆ, ಮುಂಬೈ ಬಿಜೆಪಿ ಅಧ್ಯಕ್ಷ ಆಶಿಶ್‌ ಶೇಲಾರ್‌, ಎನ್‌ಸಿಪಿ ನಾಯಕ ಧನಂಜಯ ಮುಂಡೆ- ಸಚಿವರಾದವರಲ್ಲಿ ಪ್ರಮುಖರು. ನಾಗ್ಪುರದ ರಾಜಭವನದಲ್ಲಿ ಭಾನುವಾರ ನಡೆದ ಶಪಥ ಕಾರ್ಯಕ್ರಮದಲ್ಲಿ ಇವರು ಪ್ರಮಾಣ ಸ್ವೀಕರಿಸಿದರು. ಇವರಿಗೆ ಗವರ್ನರ್‌ ಪಿ.ಸಿ. ರಾಧಾಕೃಷ್ಣನ್‌ ಪ್ರಮಾಣ ವಚನ ಬೋಧಿಸಿದರು.

ಶಪಥ ಸ್ವೀಕರಿಸಿದವರ ಪೈಕಿ 33 ಮಂದಿ ಸಚಿವ ಸಂಪುಟ ದರ್ಜೆ ಸಚಿವರಾದರೆ, 6 ಜನ ರಾಜ್ಯ ಸಚಿವರಾಗಿದ್ದಾರೆ. ಇದರೊಂದಿಗೆ ಸಂಪುಟ ಸದಸ್ಯರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ. ಇದರಲ್ಲಿ ಬಿಜೆಪಿಗೆ 19 ಸ್ಥಾನ, ಶಿವಸೇನೆಗೆ (ಶಿಂಧೆ ಬಣ) 11 ಹಾಗೂ ಎನ್‌ಸಿಪಿ (ಅಜಿತ್‌ ಬಣ)ಗೆ 9 ಸ್ಥಾನ ನೀಡಲಾಗಿದೆ. ಡಿ.5ರಂದು ದೇವೆಂದ್ರ ಫಡ್ನವೀಸ್‌ ಸಿಎಂ ಆಗಿ, ಅಜಿತ್‌ ಪವಾರ್‌ ಹಾಗೂ ಏಕನಾಥ ಶಿಂಧೆ ಅವರು ಡಿಸಿಎಂ ಆಗಿ ಶಪಥ ಸ್ವೀಕರಿಸಿದ್ದರು. ಅದಾದ 10 ದಿನಗಳ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ
ಈಗ ತೆಲಂಗಾಣದಲ್ಲೂ ದ್ವೇಷ ಭಾಷಣ ನಿಷೇಧ ಕಾಯ್ದೆ: ರೆಡ್ಡಿ