ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ

KannadaprabhaNewsNetwork |  
Published : Jan 16, 2024, 01:49 AM ISTUpdated : Jan 16, 2024, 11:36 AM IST
ಮಕರ ಜ್ಯೋತಿ | Kannada Prabha

ಸಾರಾಂಶ

ಅಯ್ಯಪ್ಪನ ದಿವ್ಯ ಸನ್ನಿಧಿ ಶಬರಿಮಲೆಯಲ್ಲಿ ಸಂಪ್ರದಾಯದಂತೆ ಈ ಬಾರಿಯೂ ಮಕರ ಸಂಕ್ರಾಂತಿ ದಿನದ ಸೂರ್ಯಾಸ್ತದ ಸಮಯದಲ್ಲಿ ಮಕರಜ್ಯೋತಿ ದರ್ಶನವಾಗಿದೆ.

ಶಬರಿಮಲೆ: ಪ್ರತಿವರ್ಷದಂತೆ ಈ ಬಾರಿಯೂ ಕೇರಳದ ಶಬರಿಮಲೆಯ ಅಯ್ಯಪ್ಪ ಸ್ವಾಮಿ ಸನ್ನಿಧಿ ಬಳಿ ಮಕರ ಸಂಕ್ರಾಂತಿ ದಿನದಂದು ‘ಮಕರ ಜ್ಯೋತಿ’ ದರ್ಶನವಾಗಿದೆ.

ಸೋಮವಾರ ಸಂಜೆ 6 ಗಂಟೆ ಬಳಿಕ ಮಕರ ಜ್ಯೋತಿ ದರ್ಶನವಾಗಿದೆ. ಈ ವೇಳೆ ಜ್ಯೋತಿಯನ್ನು ನೋಡಲೆಂದು ನೆರೆದಿದ್ದ ಲಕ್ಷಾಂತರ ಭಕ್ತಾದಿಗಳು ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂದು ಉದ್ಘರಿಸಿದರು.

ಸ್ವತಃ ಅಯ್ಯಪ್ಪ ಸ್ವಾಮಿಯೇ ಸಂಕ್ರಾಂತಿ ದಿನದಂದು ಜ್ಯೋತಿಯ ರೂಪದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾನೆ ಎಂದು ನಂಬಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಶಬರಿಮಲೆ ಚಿನ್ನಕ್ಕೆ ಕನ್ನ: ದೇವಸ್ವಂ ಮಾಜಿ ಸದಸ್ಯ ಸೆರೆ
ಷೇರಿಗಿಂತ ಚಿನ್ನ ಬೆಳ್ಳಿ ಹೂಡಿಕೆಯೇ ಹೆಚ್ಚು ಲಾಭ