ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳು ನಡೆಸಿದ ಭರ್ಜರಿ ಕಾರ್ಯಾಚರಣೆ: ಒಂದೇ ದಿನ 28 ನಕ್ಸಲರ ಎನ್‌ಕೌಂಟರ್‌

Published : Oct 05, 2024, 07:11 AM IST
Naxals

ಸಾರಾಂಶ

ಛತ್ತೀಸ್‌ಗಢದಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯೊಂದರಲ್ಲಿ 28 ನಕ್ಸಲರು ಹತರಾಗಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ಒಂದೇ ಪ್ರಕರಣದಲ್ಲಿ ನಕ್ಸಲರು ಸಾವನ್ನಪ್ಪಿದ ಅತಿದೊಡ್ಡ ಘಟನೆಯಾಗಿದೆ

ದಂತೇವಾಡ : ಛತ್ತೀಸ್‌ಗಢದಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯೊಂದರಲ್ಲಿ 28 ನಕ್ಸಲರು ಹತರಾಗಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ಒಂದೇ ಪ್ರಕರಣದಲ್ಲಿ ನಕ್ಸಲರು ಸಾವನ್ನಪ್ಪಿದ ಅತಿದೊಡ್ಡ ಘಟನೆಯಾಗಿದೆ. ಇದರೊಂದಿಗೆ ಈ ವರ್ಷದಲ್ಲಿ ಛತ್ತೀಸ್‌ಗಢವೊಂದರಲ್ಲೇ ಬಲಿಯಾದ ನಕ್ಸಲರ ಸಂಖ್ಯೆ 185ಕ್ಕೆ ಏರಿದಂತಾಗಿದೆ. ಈ ಕಾರ್ಯಾಚರಣೆಗೆ ಭದ್ರತಾ ಪಡೆಗಳನ್ನು ಶ್ಲಾಘಿಸಿರುವ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್, 'ಇದು ನಕ್ಸಲ್ ಹಾವಳಿಯನ್ನು ಇನ್ನಿಲ್ಲವಾಗಿ ಸುವ ಡಬಲ್ ಎಂಜಿನ್ ಸರ್ಕಾರದ ಶಕ್ತಿಗೆ ಉದಾಹರಣೆ' ಎಂದಿದ್ದಾರೆ.

ಏನಾಯ್ತು?: ನಾರಾಯಣಪುರ- ದಂತೇವಾಡ ಅಂತ‌ ಜಿಲ್ಲಾ ಗಡಿಯಲ್ಲಿರುವ ಅಬುಜಮದ್ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿತ್ತು. ಮಧ್ಯಾಹ್ನ 1 ಗಂಟೆ ವೇಳೆಗೆ ಭದ್ರತಾ ಪಡೆಗಳು ಮತ್ತು ನಕ್ಸಲರ ಮುಖಾಮುಖಿಯಾಗಿ ಭಾರೀ ಗುಂಡಿನ ಚಕಮಕಿ ನಡೆದಿದೆ. ಕೆಲ ಗಂಟೆಗಳ ಬಳಿಕ ನಕಲರ ಕಡೆಯಿಂದ ಗುಂಡಿನ ದಾಳಿ ನಿಂತಿದೆ. ಈ ವೇಳೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದ ವೇಳೆ 28 ನಕ್ಸಲರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳದಿಂದ ಎಕೆ-47 ಬಂದೂಕು, ಎಸ್‌ಎಲ್‌ಆರ್ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯಶಸ್ಸು ಸಿಕ್ಕಿದ್ದೇಗೆ?: ನಕ್ಸಲರು ಹೆಚ್ಚಿರುವ ಬಸ್ತರ್‌ಸೇರಿದಂತೆ ಪ್ರಮುಖ ಅರಣ್ಯ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ತಮ್ಮ ಕ್ಯಾಂಪ್‌ಗಳ ಪ್ರಮಾಣವನ್ನು ಈ ವರ್ಷ ಹೆಚ್ಚಿಸಿವೆ. ಹೀಗಾಗಿ ನಕಲರ ಓಡಾಟ, ಜನ ರೊಂದಿಗಿನ ನಂಟು ಕಡಿತವಾಗಿದೆ. ಜೊತೆಗೆ ಕಾಡಿನೊಳಗೆ ಮುಂಚೂಣಿ ಕ್ಯಾಂಪ್ ನಿರ್ಮಾಣದಿಂದ ಕಾರ್ಯಾಚರಣೆ ಸುಲಭವಾಗಿದೆ. ಹೀಗಾಗಿ ಈ ವರ್ಷವೊಂದರಲ್ಲೇ 185 ನಕ್ಸಲರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಈಗ ಖರ್ಗೆ ಹೆಗಲಿಗೆ ನಿರ್ಧಾರ ಯಾರು ಆಗ್ತಾರೆ ಕೇರಳಂ ಸಿಎಂ?
ಪಶ್ಚಿಮ ಬಂಗಾಳ ವಿಧಾನಸಭೆ ವಿರ್ಸಜನೆ ಗೌರ್‍ನರ್‌ ಗೇಟ್‌ ಪಾಸ್‌ : ದೀದಿ ಈಗ ಬೀದಿಗೆ!