ನವದೆಹಲಿ: ‘ಮಿಷನ್ ದಿವ್ಯಾಸ್ತ್ರ’ ಎಂದೇ ಖ್ಯಾತಿ ಪಡೆದಿರುವ ಎಂಐಆರ್ವಿ ತಂತ್ರಜ್ಞಾನದ ಸ್ವದೇಶಿ ಅಗ್ನಿ-5 ಕ್ಷಿಪಣಿ ಯಶಸ್ಸಿನ ಹಿಂದೆ ಶೀನಾ ರಾಣಿ ಎಂಬ ಮಹಿಳಾ ವಿಜ್ಞಾನಿಯ ಅಪಾರ ಶ್ರಮ ಇದೆ. ಶೀನಾ ರಾಣಿ 1999ರಿಂದಲೇ ಅಗ್ನಿ ಕ್ಷಿಪಣಿ ಅಭಿವೃದ್ಧಿಪಡಿಸುವ ಯೋಜನೆಯಲ್ಲಿದ್ದು, ಇತ್ತೀಚಿನ ಯಶಸ್ಸಿಗೆ ಪ್ರಮುಖ ಕಾರಣಕರ್ತೆ ಆಗಿದ್ದಾರೆ.
ಬಳಿಕ ಅಗ್ನಿ ಸರಣಿಯ ಕ್ಷಿಪಣಿಯ ತಯಾರಿಕೆ, ಉಡಾವಣೆ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಕೆಲಸ ಮಾಡಿ ಶಕ್ತಿಕೇಂದ್ರದ ಇಂಧನ ಎಂದೇ ಖ್ಯಾತಿ ಗಳಿಸಿದ್ದಾರೆ. ಪ್ರಸ್ತುತ ಅವರು ಹೈದರಾಬಾದ್ನ ಡಿಆರ್ಡಿಒ ಸುಧಾರಿತ ಸಲಕರಣೆಗಳ ಪ್ರಯೋಗಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕಲಾಂ, ಅಗ್ನಿಪುತ್ರಿ ಪ್ರೇರಣೆ:ಭಾರತದ ಅಣ್ವಸ್ತ್ರ ಪಿತಾಮಹ ಡಾ। ಎಪಿಜೆ ಅಬ್ದುಲ್ ಕಲಾಂ ಮೊದಲು ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿದ್ದು ನಂತರ ಡಿಆರ್ಡಿಒ ಸೇರಿಕೊಂಡಿದ್ದರು. ಶೀನಾ ಕೂಡ ಕಲಾಂ ರೀತಿ ಸಾರಾಭಾಯಿ ಕೇಂದ್ರದಿಂದ ಡಿಆರ್ಡಿಒಗೆ ಪ್ರಯಾಣ ಬೆಳೆಸಿದ್ದು ಇಲ್ಲಿ ಗಮನಾರ್ಹ,