ಮುಂಬೈನಲ್ಲಿ ದಿಢೀರ್‌ ದೂಳಿನ ಬಿರುಗಾಳಿ: 8 ಸಾವು

KannadaprabhaNewsNetwork |  
Published : May 14, 2024, 01:02 AM ISTUpdated : May 14, 2024, 05:01 AM IST
ಮುಂಬೈ | Kannada Prabha

ಸಾರಾಂಶ

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಸೋಮವಾರ ಸಂಜೆ ದಿಢೀರನೆ ಬೀಸಿದ ಧೂಳಿನ ಬಿರುಗಾಳಿ ಭಾರೀ ಅನಾಹುತ ಸೃಷ್ಟಿಸಿದೆ.

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಸೋಮವಾರ ಸಂಜೆ ದಿಢೀರನೆ ಬೀಸಿದ ಧೂಳಿನ ಬಿರುಗಾಳಿ ಭಾರೀ ಅನಾಹುತ ಸೃಷ್ಟಿಸಿದೆ. ಭಾರಿ ಬಲವಾದ ಗಾಳಿ ಬೀಸಿದ ಪರಿಣಾಮ ದೊಡ್ಡ ದೊಡ್ಡ ಬಿಲ್‌ಬೋರ್ಡ್‌ ಉರುಳಿ ಬಿದ್ದು 8 ಜನರು ಸಾವನ್ನಪ್ಪಿದ್ದು, 65 ಜನರು ಗಾಯಗೊಂಡಿದ್ದಾರೆ. ಗಾಳಿಯ ಬೆನ್ನಲ್ಲೇ ಮಳೆ ಕೂಡಾ ಸುರಿದಿದೆ.

ಇದರಿಂದ ಕೆಲ ಗಂಟೆಗಳ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಮುಂಬೈನ ಕೆಲವೆಡೆ ಮೆಟ್ರೋ, ಸ್ಥಳೀಯ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ವಿಮಾನ ಸಂಚಾರದಲ್ಲಿಯೂ ವ್ಯತ್ಯಯ ಉಂಟಾಗಿತ್ತು.ಧೂಳು ಮಿಶ್ರಿತ ಬಿರುಗಾಳಿ ಬೀಸುತ್ತಿದ್ದಂತೆ ಸುತ್ತಲು ಕತ್ತಲೂ ಕವಿದ ವಾತವಾರಣ ಸೃಷ್ಟಿಯಾಗಿತ್ತು. ಹೀಗಾಗಿ ತಾತ್ಕಾಲಿಕವಾಗಿ ಕೆಲ ಹೊತ್ತು ವಿಮಾನಗಳ ಹಾರಾಟ ನಿಲ್ಲಿಸಲಾಗಿತ್ತು. ಮೆಟ್ರೋ ಹಳಿಯ ಮೇಲೆ ಜಾಹೀರಾತು ಫಲಕ ಬಿದ್ದು, ಅರೇಯಾ ಮತ್ತು ಅಂಧೇರಿ ಪೂರ್ವದ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. ಬಲವಾದ ಗಾಳಿಯಿಂದ ಥಾಣೆ ಮತ್ತು ಮುಲ್ನೆಡ್ ಮಾರ್ಗದ ರೈಲ್ವೆ ಹಳಿಗಳು ಬಾಗಿದ ಘಟನೆಯೂ ನಡೆದಿದೆ.

ಇನ್ನು ಬಲಗಾಳಿಯಿಂದ ಮುಂಬೈನ ಹಲೆವೆಡೆ ಫ್ಲೆಕ್ಸ್‌ಗಳು ನೆಲಕ್ಕುರುಳಿವೆ. ಇಲ್ಲಿನ ಘೋಟ್ಕಪುರದಲ್ಲಿ ಫ್ಲೆಕ್ಸ್ ಬಿದ್ದು 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಹಲೆವೆಡೆ ಮರಗಳು ಧರೆಗುರುಳಿದ್ದು, ವಿದ್ಯುತ್ ವ್ಯತ್ಯಯವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಇಸ್ರೋ ಹೊಸ ಮೈಲುಗಲ್ಲು-6100 ಕೆಜಿ ತೂಕದ ಉಪಗ್ರಹ 15 ನಿಮಿಷದಲ್ಲಿ ಕಕ್ಷೆಗೆ
ಶತ್ರು- ಮಿತ್ರರಿಗೆ ಮಹಾ ಸಹೋದರರ ಸವಾಲ್‌!