ಯೋಗ ಗುರು ಬಾಬಾ ರಾಮದೇವ್, ಅವರ ಆಪ್ತ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ಸಂಸ್ಥೆ ವಿರುದ್ಧ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ಸುಪ್ರೀಂಕೋರ್ಟ್ ಸಮ್ಮತಿಸಿದೆ.
ನವದೆಹಲಿ: ಯೋಗ ಗುರು ಬಾಬಾ ರಾಮದೇವ್, ಅವರ ಆಪ್ತ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ಸಂಸ್ಥೆ ವಿರುದ್ಧ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಪ್ರಕರಣ ಸಂಬಂಧ ಆರೋಪಿಗಳು ಸಲ್ಲಿಸಿದ ಕ್ಷಮಾಪಣೆ ಮನ್ನಿಸಿ ನ್ಯಾಯಾಲಯ ಈ ನಿರ್ಧಾರ ಕೈಗೊಂಡಿದೆ.
ಕೋವಿಡ್ ವೇಳೆ ಪತಂಜಲಿ ಸಂಸ್ಥೆ, ಅಲೋಪತಿ ಚಿಕಿತ್ಸೆ ಬಗ್ಗೆ ನೀಡಿದ್ದ ಜಾಹೀರಾತು ಮಾನಹಾನಿಕರವಾಗಿದೆ. ಅಲೋಪತಿ ವೈದ್ಯ ಪದ್ಧತಿಯನ್ನು ಅವಮಾನಿಸುವಂತಿದೆ ಎಂದು ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ದೂರು ಸಲ್ಲಿಸಿತ್ತು. ಈ ಪ್ರಕರಣದ ವಿಚಾರಣೆ ವೇಳೆ ಜಾಹೀರಾತು ಹಿಂಪಡೆಯಲಾಗುವುದು ಎಂದು ಹೇಳಿದ್ದ ಪತಂಜಲಿ ಸಂಸ್ಥೆ ಅದರಂತೆ ನಡೆದುಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಸ್ವಯಂ ನ್ಯಾಯಾಂಗ ನಿಂದನಾ ಕೇಸು ದಾಖಲಿಸಿಕೊಂಡಿತ್ತು.
ಆದರೆ ಬಳಿಕ ಕೋರ್ಟ್ಗೆ ಖುದ್ದು ಹಾಜರಾಗಿದ್ದ ರಾಮದೇವ್ ಹಾಗೂ ಬಾಲಕೃಷ್ಣ ಕ್ಷಮೆ ಕೇಳಿದ್ದರು ಹಾಗೂ ಕೋರ್ಟ್ ಸೂಚನೆಯಂತೆ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಬಹಿರಂಗ ಕ್ಷಮೆ ಕೇಳಿದ್ದರು. ಹೀಗಾಗಿ ನಿಂದನಾ ಪ್ರಕರಣ ಕೈಬಿಡಲಾಗಿದೆ.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.