;Resize=(412,232))
ನವದೆಹಲಿ: ದೇಶದ ಕೃಷಿ ಮತ್ತು ಆರ್ಥಿಕತೆಯ ಮೂಲವಾದ ಮುಂಗಾರು ಮಾರುತಗಳುಈ ವಾರದ ಕೊನೆಯಲ್ಲಿ (ಮೇ 17) ದಕ್ಷಿಣ ಬಂಗಾಳದ ಉಪಸಾಗರ, ಅಂಡಮಾನ್ ಸಮುದ್ರ ಮತ್ತು ಅಂಡಮಾನ್, ನಿಕೋಬಾರ್ ದ್ವೀಪಗಳಿಗೆ ಆಗಮಿಸುವ ಸಾಧ್ಯತೆಯಿದೆ.
ವಾಡಿಕೆಯಂತೆ ಇದು ಮೇ 22ಕ್ಕೆ ಅಂಡಮಾನ್ ಪ್ರವೇಶಿಸುತ್ತದೆ.
ಆದರೆ ಈ ಬಾರಿ ಸುಮಾರು 5-6 ದಿನ ಮುಂಚಿತವಾಗಿ ಆಗಮಿಸಲಿದೆ. ಸಾಮಾನ್ಯವಾಗಿ ಜೂ.1ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸುತ್ತದೆ. ಈ ಮೂಲಕ 4 ತಿಂಗಳ ಮಳೆಗಾಲ ಆರಂಭವಾಗುತ್ತದೆ.