ಚಂಡೀಗಢ: ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್ಎಲ್ಡಿ) ಪಕ್ಷದ ಹರ್ಯಾಣ ಘಟಕದ ಅಧ್ಯಕ್ಷ ನಫೆ ಸಿಂಗ್ ರಾಠಿ ಅವರನ್ನು ಬಂದೂಕುಧಾರಿಗಳು ಭಾನುವಾರ ಸಂಜೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.
ಈ ವೇಳೆ ಮತ್ತೊಂದು ಕಾರಿನಲ್ಲಿ ಬಂದ ದಾಳಿಕೋರರು ಏಕಾಏಕಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಈ ಕುರಿತು ಐಎನ್ಎಲ್ಡಿ ಪಕ್ಷದ ನಾಯಕ ಅಭಯ್ ಚೌಟಾಯಾ ಮಾತನಾಡಿ, ರಾಜ್ಯದಲ್ಲಿ ಕಾನೂನು ಹದಗೆಟ್ಟಿದೆ.
ಈ ಕೂಡಲೇ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.ನಫೇ ಸಿಂಗ್ ಈ ಹಿಂದೆ ಹರ್ಯಾಣ ಶಾಸಕರಾಗಿದ್ದರು.