ಹರ್ಯಾಣ ಐಎನ್‌ಎಲ್‌ಡಿ ನಾಯಕ ನಫೆ ಸಿಂಗ್‌ ಬರ್ಬರ ಹತ್ಯೆ

KannadaprabhaNewsNetwork |  
Published : Feb 26, 2024, 01:33 AM IST
ನಫೆ | Kannada Prabha

ಸಾರಾಂಶ

ಐಎನ್‌ಎಲ್‌ಡಿ ಪಕ್ಷದ ಹರ್‍ಯಾಣ ಅಧ್ಯಕ್ಷರಾಗಿದ್ದ ನಫೆ ಸಿಂಗ್‌ ರಾಠಿ ಅವರು ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ.

ಚಂಡೀಗಢ: ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಪಕ್ಷದ ಹರ್ಯಾಣ ಘಟಕದ ಅಧ್ಯಕ್ಷ ನಫೆ ಸಿಂಗ್‌ ರಾಠಿ ಅವರನ್ನು ಬಂದೂಕುಧಾರಿಗಳು ಭಾನುವಾರ ಸಂಜೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.

ಹರ್ಯಾಣದ ಝಜ್ಜರ್‌ ಜಿಲ್ಲೆಯಲ್ಲಿ ನಾಫೆ ಸಿಂಗ್‌ ತಮ್ಮ ಎಸ್‌ಯುವಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ಈ ವೇಳೆ ಮತ್ತೊಂದು ಕಾರಿನಲ್ಲಿ ಬಂದ ದಾಳಿಕೋರರು ಏಕಾಏಕಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಈ ಕುರಿತು ಐಎನ್‌ಎಲ್‌ಡಿ ಪಕ್ಷದ ನಾಯಕ ಅಭಯ್‌ ಚೌಟಾಯಾ ಮಾತನಾಡಿ, ರಾಜ್ಯದಲ್ಲಿ ಕಾನೂನು ಹದಗೆಟ್ಟಿದೆ.

ಈ ಕೂಡಲೇ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನಫೇ ಸಿಂಗ್‌ ಈ ಹಿಂದೆ ಹರ್ಯಾಣ ಶಾಸಕರಾಗಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಈಗ ಖರ್ಗೆ ಹೆಗಲಿಗೆ ನಿರ್ಧಾರ ಯಾರು ಆಗ್ತಾರೆ ಕೇರಳಂ ಸಿಎಂ?
ಪಶ್ಚಿಮ ಬಂಗಾಳ ವಿಧಾನಸಭೆ ವಿರ್ಸಜನೆ ಗೌರ್‍ನರ್‌ ಗೇಟ್‌ ಪಾಸ್‌ : ದೀದಿ ಈಗ ಬೀದಿಗೆ!