ಭಾರತವನ್ನು ಅಸ್ಥಿರಗೊಳಿಸುವ ಅಲ್-ಖೈದಾ ಉಗ್ರ ಸಂಘಟನೆಯ ಸಂಚು : ಕರ್ನಾಟಕದಲ್ಲಿ ಎನ್‌ಐಎ ಶೋಧ

KannadaprabhaNewsNetwork |  
Published : Nov 11, 2024, 11:45 PM ISTUpdated : Nov 12, 2024, 08:23 AM IST
ಎನ್‌ಐಎ | Kannada Prabha

ಸಾರಾಂಶ

ಭಾರತವನ್ನು ಅಸ್ಥಿರಗೊಳಿಸುವ ಅಲ್-ಖೈದಾ ಉಗ್ರ ಸಂಘಟನೆಯ ಸಂಚಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ವ್ಯಾಪಕ ಶೋಧ ನಡೆಸಿದೆ ಹಾಗೂ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

 ನವದೆಹಲಿ : ಭಾರತವನ್ನು ಅಸ್ಥಿರಗೊಳಿಸುವ ಅಲ್-ಖೈದಾ ಉಗ್ರ ಸಂಘಟನೆಯ ಸಂಚಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ವ್ಯಾಪಕ ಶೋಧ ನಡೆಸಿದೆ ಹಾಗೂ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಅಲ್‌ ಖೈದಾ ಪರ ಕೆಲವು ಬಾಂಗ್ಲಾದೇಶಿ ಪ್ರಜೆಗಳು ಪ್ರಚಾರ ಮಾಡಿದ ಕೆಲವು ಯುವಕರನ್ನು ಸೆಳೆದಿದ್ದರು ಎಂಬ ವಿಷಯ ಬೆಳಕಿಗೆ ಬರುತ್ತಿದ್ದಂತೆಯೇ 2023ರಲ್ಲಿ ಐವರನ್ನು ಬಂಧಿಸಲಾಗಿತ್ತು. ಇವರ ಬಗ್ಗೆ ಸಹಾನುಭೂತಿ ಹೊಂದಿದ್ದ ಹಾಗೂ ಅಲ್-ಖೈದಾ ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ಧ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ತ್ರಿಪುರಾ ಮತ್ತು ಅಸ್ಸಾಂನ 9 ಕಡೆ ದಾಳಿ ಮಾಡಲಾಗಿದೆ.

ಈ ವೇಳೆ ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ ಫೋನ್‌, ಡಿಜಿಟಲ್ ಸಾಧನಗಳು ಮತ್ತು ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಐಎ ಹೇಳಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ