ದಿಲ್ಲಿ ಕಳಪೆ ವಾಯುಗುಣಮಟ್ಟ : ಮಾಲಿನ್ಯ ತಗ್ಗಿಸುವ ಸಲುವಾಗಿ ಮಾ.31ರಿಂದ 15 ವರ್ಷ ಹಳೇ ವಾಹನಕ್ಕೆ ಇಂಧನವಿಲ್ಲ

KannadaprabhaNewsNetwork |  
Published : Mar 02, 2025, 01:15 AM ISTUpdated : Mar 02, 2025, 06:38 AM IST
ಪೆಟ್ರೋಲ್‌ ಪಂಪ್‌ | Kannada Prabha

ಸಾರಾಂಶ

ಕಳಪೆ ವಾಯುಗುಣಮಟ್ಟದಿಂದ ಉಸಿರುಗಟ್ಟುತ್ತಿರುವ ದೆಹಲಿಯಲ್ಲಿ ಮಾಲಿನ್ಯ ತಗ್ಗಿಸುವ ಸಲುವಾಗಿ ಮಾ.31ರಿಂದ 15 ವರ್ಷ ಹಳೆದ ವಾಹನಗಳಿಗೆ ಇಂಧನ ನೀಡಲಾಗುವುದಿಲ್ಲ ಎಂದು ಪರಿಸರ ಸಚಿವ ಮಜಿಂದರ್‌ ಸಿಂಗ್‌ ಸಿರ್ಸಾ ಘೋಷಿಸಿದ್ದಾರೆ.

 ನವದೆಹಲಿ: ಕಳಪೆ ವಾಯುಗುಣಮಟ್ಟದಿಂದ ಉಸಿರುಗಟ್ಟುತ್ತಿರುವ ದೆಹಲಿಯಲ್ಲಿ ಮಾಲಿನ್ಯ ತಗ್ಗಿಸುವ ಸಲುವಾಗಿ ಮಾ.31ರಿಂದ 15 ವರ್ಷ ಹಳೆದ ವಾಹನಗಳಿಗೆ ಇಂಧನ ನೀಡಲಾಗುವುದಿಲ್ಲ ಎಂದು ಪರಿಸರ ಸಚಿವ ಮಜಿಂದರ್‌ ಸಿಂಗ್‌ ಸಿರ್ಸಾ ಘೋಷಿಸಿದ್ದಾರೆ. ಈ ಮೂಲಕ 3 ವರ್ಷ ಹಿಂದೆಯೇ ಜಾರಿಯಾಗಿದ್ದ ಈ ನೀತಿಯ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ನಿರ್ಧರಿಸಿದ್ದಾರೆ.

ಮಾಲಿನ್ಯ ತಡೆಗಾಗಿ ಸಿರ್ಸಾ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಹಳೆಯ ವಾಹನಗಳ ಮೇಲೆ ನಿರ್ಬಂಧ, ಕಡ್ಡಾಯ ಹೊಗೆ- ನಿರೋಧಕ ಕ್ರಮ ಮತ್ತು ಸಾರ್ವಜನಿಕ ಸಾರಿಗೆಯ ವಿದ್ಯುತೀಕರಣದ ಕುರಿತು ಚರ್ಚಿಸಲಾಗಿದೆ.

ಬಳಿಕ ಮಾತನಾಡಿದ ಸಿರ್ಸಾ, ‘15 ವರ್ಷಕ್ಕೂ ಹಳೆಯ ವಾಹನಗಳ ಪತ್ತೆಗೆ ಪೆಟ್ರೋಲ್‌ ಪಂಪ್‌ಗಳಲ್ಲಿ ಉಪಕರಣಗಳನ್ನು ಅಳವಡಿಸಲಾಗುವುದು ಹಾಗೂ ಹಳೆ ವಾಹನಗಳಿಗೆ ಇಂಧನ ತುಂಬಿಸುವುದಿಲ್ಲ. ಈ ನಿರ್ಧಾರವನ್ನು ದೆಹಲಿ ಸರ್ಕಾರ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ತಿಳಿಸಲಿದೆ’ ಎಂದರು.

ಜೊತೆಗೆ, ಎತ್ತರದ ಕಟ್ಟಡ, ಹೋಟೆಲ್‌, ವಾಣಿಜ್ಯ ಸಂಕೀರ್ಣಗಳಲ್ಲಿ ಹೊಗೆ ವಿರೋಧಿ ಗನ್‌ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚಿಸಿದ್ದಾರೆ.

ದಿಲ್ಲಿಯಲ್ಲಿ ನಿಯಮ ಏನು?:

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳನ್ನು ರಸ್ತೆಗಳಲ್ಲಿ ಅನುಮತಿಸುವುದಿಲ್ಲ ಎಂಬ ನೀತಿ ಇದೆ.

2021ರ ಆದೇಶದ ಪ್ರಕಾರ, ಜನವರಿ 1, 2022ರ ನಂತರ ರಸ್ತೆಗಳಲ್ಲಿ ಅಂಥ ವಾಹನಗಳ ಸಂಚಾರ ಕಂಡುಬಂದರೆ ಅವನನ್ನು ಮುಟ್ಟುಗೋಲು ಹಾಕಿಕೊಂಡು ಸ್ಕ್ರ್ಯಾಪ್‌ಯಾರ್ಡ್‌ಗೆ ಕಳುಹಿಸಲಾಗುವುದು ಎಂದು ತಿಳಿಸಲಾಗಿತ್ತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕೇಂದ್ರ ಸಚಿವ ಚೌಹಾಣ್‌ ಐಎಸ್‌ಐ ಟಾರ್ಗೆಟ್‌: ಭದ್ರತೆ ಹೆಚ್ಚಳ
ಆನಂದದ ಕ್ಷಣ ದುರಂತದ ಕ್ಷಣವಾಗಿ ಬದಲು!